ಬೆಂಗಳೂರು : ಕಾಡುಗೋಡಿಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಲ್, ಆಕಾಶ್, ಸಂತೋಶ್, ಸುರೆಂದರ್, ಅಂಬರೀಶ್ ಹಾಗೂ ಕಿರಣ್ ಬಂಧಿತ ಆರೋಪಿಗಳು.
ಸಿಗರೇಟ್ ವಿಚಾರಕ್ಕೆ ಸ್ನೇಹಿತರ ಮಧ್ಯೆ ಶುರುವಾಗಿದ್ದ ಗಲಾಟೆ ಅತಿರೇಕಕ್ಕೆ ತೆರಳಿ, ಆರೋಪಿಗಳು ಡೀಗರ್ @ ಧನಂಜಯ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ಹೋಟೆಲ್ ಮ್ಯಾನೇಜರ್ ದೂರು ನೀಡಿದ್ದರು.
ಹೋಟೆಲ್ ಮ್ಯಾನೇಜರ್ ದೂರಿನ ಮೇರೆಗೆ ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಮತ್ತು ಹಲ್ಲೆಗೊಳಗಾದ ಧನಂಜಯ್ ಎಲ್ಲರೂ ಹೋಟೆಲ್ನಲ್ಲಿ ಕೆಲಸ ಮಾಡ್ತಿದ್ದರು.
ಇದನ್ನೂ ಓದಿ : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಮೇಜರ್ ಟ್ವಿಸ್ಟ್ – ಸಚಿವ ಶರಣಪ್ರಕಾಶ್ ಪಾಟೀಲ್ಗೂ ಇದ್ಯಾ ಹಗರಣದ ನಂಟು?
Post Views: 101