Download Our App

Follow us

Home » ಅಪರಾಧ » ಕಲಬುರಗಿ ಬಿಜೆಪಿ ಕಾರ್ಯಕರ್ತರ ಹ*ತ್ಯೆ ಕೇಸ್ – ಆರೋಪಿಗಳು ಅರೆಸ್ಟ್, ಸಂತ್ರಸ್ತ ಕುಟುಂಬಗಳಿಗೆ ಆರ್.ಅಶೋಕ್‌ ಸಾಂತ್ವನ..!

ಕಲಬುರಗಿ ಬಿಜೆಪಿ ಕಾರ್ಯಕರ್ತರ ಹ*ತ್ಯೆ ಕೇಸ್ – ಆರೋಪಿಗಳು ಅರೆಸ್ಟ್, ಸಂತ್ರಸ್ತ ಕುಟುಂಬಗಳಿಗೆ ಆರ್.ಅಶೋಕ್‌ ಸಾಂತ್ವನ..!

ಕಲಬುರಗಿ : ಆಳಂದ ತಾಲೂಕಿನ ಸರಸಂಭಾ ಹಾಗೂ ಅಫಜಲಪುರ ತಾಲೂಕಿನ ಸಾಗನೂರ ಜಮೀನಿನಲ್ಲಿ ಇತ್ತೀಚಿಗೆ ನಡೆದ ಇಬ್ಬರು ಬಿಜೆಪಿ ಕಾರ್ಯಕರ್ತರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌.

ಪೊಲೀಸರು ಬಿಜೆಪಿ ಕಾರ್ಯಕರ್ತ ಮಹಾಂತಪ್ಪ ಆಲೂರೆ ಕೊಲೆ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದಾರೆ. ಸರಸಂಭಾ ಗ್ರಾಮದ ಅಜಿತ್ ಕುಮಾರ ಕ್ಷೇತ್ರಿ  ಹಾಗೂ ಈತನ‌ ಸಹಚರರಾದ ಆಕಾಶ್ ಕಾಮಠಿ, ಮಯೂರ್ ಕ್ಷೇತ್ರಿ ಎಂಬಿಬ್ಬರನ್ನು ಮಹಾರಾಷ್ಟ್ರದ ಪುನಾನದಲ್ಲಿ ​ವಿಶೇಷ ಪೊಲೀಸ್ ತಂಡ ಬಂಧಿಸಿದೆ.

ಸಂಸದ ಉಮೇಶ ಜಾಧವ ಅವರ ಬೆಂಬಲಿಗ, ಬಿಎಸ್‌ಎನ್‌ಎಲ್ ಸಲಹಾ ಸಮಿತಿ ಸದಸ್ಯ ಗಿರೀಶ್​ಬಾಬು ಚಕ್ರ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಫಜಲಪುರರ ತಾಲೂಕಿನ‌ ಮಾಶಾಳ ಗ್ರಾಮದ ಹಾಗೂ ಸದ್ಯ ಸಾಗನೂರ ಗ್ರಾಮದಲ್ಲಿ ವಾಸವಿರುವ ಸಚೀನ್ ಕಿರಸಾವಳಗಿ, ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದ ವಿಶ್ವನಾಥ ಅಲಿಯಾಸ್ ಕುಮ್ಯಾ ಮಂಜಾಳಕರ್, ಪ್ರಜ್ವಲ್ ಅಲಿಯಾಸ್ ಪುಟ್ಯಾ ಭಜಂತ್ರಿ ನನ್ನು ಬಂಧಿಸಿದ್ದಾರೆ.

ಆರ್.ಅಶೋಕ್‌ ಸಾಂತ್ವನ : ಕೊಲೆಯಾದ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್​.ಅಶೋಕ್​ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ : ಶಂಕಿತ ಉಗ್ರರ ಬಂಧನ ಪ್ರಕರಣ : ಬೆಂಗಳೂರು ಸೇರಿ ಏಳು ರಾಜ್ಯಗಳಲ್ಲಿ NIA ದಾಳಿ​..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here