ಕಲಬುರಗಿ : ಆಳಂದ ತಾಲೂಕಿನ ಸರಸಂಭಾ ಹಾಗೂ ಅಫಜಲಪುರ ತಾಲೂಕಿನ ಸಾಗನೂರ ಜಮೀನಿನಲ್ಲಿ ಇತ್ತೀಚಿಗೆ ನಡೆದ ಇಬ್ಬರು ಬಿಜೆಪಿ ಕಾರ್ಯಕರ್ತರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ಬಿಜೆಪಿ ಕಾರ್ಯಕರ್ತ ಮಹಾಂತಪ್ಪ ಆಲೂರೆ ಕೊಲೆ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದಾರೆ. ಸರಸಂಭಾ ಗ್ರಾಮದ ಅಜಿತ್ ಕುಮಾರ ಕ್ಷೇತ್ರಿ ಹಾಗೂ ಈತನ ಸಹಚರರಾದ ಆಕಾಶ್ ಕಾಮಠಿ, ಮಯೂರ್ ಕ್ಷೇತ್ರಿ ಎಂಬಿಬ್ಬರನ್ನು ಮಹಾರಾಷ್ಟ್ರದ ಪುನಾನದಲ್ಲಿ ವಿಶೇಷ ಪೊಲೀಸ್ ತಂಡ ಬಂಧಿಸಿದೆ.
ಸಂಸದ ಉಮೇಶ ಜಾಧವ ಅವರ ಬೆಂಬಲಿಗ, ಬಿಎಸ್ಎನ್ಎಲ್ ಸಲಹಾ ಸಮಿತಿ ಸದಸ್ಯ ಗಿರೀಶ್ಬಾಬು ಚಕ್ರ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಫಜಲಪುರರ ತಾಲೂಕಿನ ಮಾಶಾಳ ಗ್ರಾಮದ ಹಾಗೂ ಸದ್ಯ ಸಾಗನೂರ ಗ್ರಾಮದಲ್ಲಿ ವಾಸವಿರುವ ಸಚೀನ್ ಕಿರಸಾವಳಗಿ, ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದ ವಿಶ್ವನಾಥ ಅಲಿಯಾಸ್ ಕುಮ್ಯಾ ಮಂಜಾಳಕರ್, ಪ್ರಜ್ವಲ್ ಅಲಿಯಾಸ್ ಪುಟ್ಯಾ ಭಜಂತ್ರಿ ನನ್ನು ಬಂಧಿಸಿದ್ದಾರೆ.
ಆರ್.ಅಶೋಕ್ ಸಾಂತ್ವನ : ಕೊಲೆಯಾದ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಇದನ್ನೂ ಓದಿ : ಶಂಕಿತ ಉಗ್ರರ ಬಂಧನ ಪ್ರಕರಣ : ಬೆಂಗಳೂರು ಸೇರಿ ಏಳು ರಾಜ್ಯಗಳಲ್ಲಿ NIA ದಾಳಿ..!