ಕಲಬುರಗಿ : ಸಾಲ ಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಆಳಂದ ತಾಲ್ಲೂಕಿನ ವಳವಂಡವಾಡಿ ಗ್ರಾಮದಲ್ಲಿ ನಡೆದಿದೆ. 72 ವರ್ಷದ ಸುಬ್ಬಣ್ಣ ಬಟಗೇರಿ ಆತ್ಮಹತ್ಯೆ ಮಾಡಿಕೊಂಡ ರೈತ.
ಮೃತ ಸುಬ್ಬಣ್ಣ ಬಟಗೇರಿ ಬ್ಯಾಂಕ್, ಸೊಸೈಟಿ ಹಾಗೂ ಖಾಸಗಿಯಾಗಿ 9 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗ್ತಿದೆ. ಸಾಲ ತೀರಿಸಲಾಗದೆ ಸುಬ್ಬಣ್ಣ ಬಟಗೇರಿ ತನ್ನ ಜಮೀನಿನಲ್ಲೇ ವಿಷ ಸೇವಿಸಿ ಸೂಸೈಡ್ ಮಾಡಿಕೊಂಡಿದ್ದಾರೆ. ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಸಂಜು ವೆಡ್ಸ್ ಗೀತಾ-2 ಚಿತ್ರದ ಸಾಂಗ್ಗೆ ಕುಣಿದ ಕಿಟ್ಟಿ-ರಚ್ಚು-ರಾಗಿಣಿ ದ್ವಿವೇದಿ..!
Post Views: 52