ಕಲಬುರಗಿ : ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರ ಹೊರವಲಯದ ಶಹಬಾದ್ ರಸ್ತೆಯ ಡಾಮಿನೆಂಟ್ ಧಾಭಾ ಹಿಂಬದಿ ನಡೆದಿದೆ. ಬೊಮ್ಮನಹಳ್ಳಿ ಗ್ರಾಮದ ಪ್ರವೀಣ್ ಬಿರಾದಾರ್ (24) ಕೊಲೆಯಾದ ವ್ಯಕ್ತಿ.
ಹಳೆ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಎಣ್ಣೆ ಪಾರ್ಟಿ ಮುಗಿದ ಬಳಿಕ ಪ್ರವೀಣ್ನನ್ನು ಕೊಚ್ಚಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಸಿಟಿ ಪೊಲೀಸ್ ಕಮಿಷನರ್ ಚೇತನ್,ಡಿಸಿಪಿ ಕನ್ನಿಕ ಸಿಕ್ರಿವಾಲ್ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದಿಂದಲೂ ಘಟನಾ ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ. ಇನ್ನು ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವಿಜಯಪುರ : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!
Post Views: 140