Download Our App

Follow us

Home » ಸಿನಿಮಾ » ಕನ್ನಡದ ಪ್ರಚಂಡ ಕುಳ್ಳ ನಟ ದ್ವಾರಕೀಶ್ ಪಂಚಭೂತಗಳಲ್ಲಿ ಲೀನ..!

ಕನ್ನಡದ ಪ್ರಚಂಡ ಕುಳ್ಳ ನಟ ದ್ವಾರಕೀಶ್ ಪಂಚಭೂತಗಳಲ್ಲಿ ಲೀನ..!

ಕನ್ನಡದ ಹಿರಿಯ ನಟ ದ್ವಾರಕೀಶ್ ಅವರು ನಿನ್ನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದರು. ಇಂದು ಬೆಂಗಳೂರಿನ ಟಿ.ಆರ್ ಮೀಲ್​​ನಲ್ಲಿರುವ ರುದ್ರಭೂಮಿಯಲ್ಲಿ ಬ್ರಾಹ್ಮಣರ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ದ್ವಾರಕೀಶ್ ಹಿರಿಯ ಪುತ್ರ ಸಂತೋಷ್ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಅಲ್ಲಿಗೆ ದ್ವಾರಕೀಶ್ ಪಂಚಭೂತಗಳಲ್ಲಿ ಲೀನವಾದರು.

ಚಿತೆಗೆ ಅಗ್ನಿಸ್ಪರ್ಷಕ್ಕೂ ಮುನ್ನ ಪೊಲೀಸ್ ಇಲಾಖೆಯು ಪೊಲೀಸ್ ಗೌರವವನ್ನು ಸಲ್ಲಿಸಲಾಯಿತು. ನಂತರ ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ. ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ , ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಯಿತು.

ನಿನ್ನೆಯಿಂದ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕನ್ನಡ ಚಿತ್ರೋದ್ಯಮದ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದರು.

ಇದನ್ನೂ ಓದಿ : ಕನ್ನಡದ ಖ್ಯಾತ ಯೂಟ್ಯೂಬರ್​​ ಅರೆಸ್ಟ್ : ಕಾರಣವೇನು ಗೊತ್ತಾ?

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here