Download Our App

Follow us

Home » ಸಿನಿಮಾ » ಆಕ್ಷೇಪಾರ್ಹ ಪದ ಬಳಕೆ – ನಟ ದರ್ಶನ್​ ವಿರುದ್ಧ ಫಿಲಂ ಚೇಂಬರ್​ಗೆ ದೂರು ನೀಡಿದ ಕರ್ನಾಟಕ‌ ಪ್ರಜಾಪರ ವೇದಿಕೆ..!

ಆಕ್ಷೇಪಾರ್ಹ ಪದ ಬಳಕೆ – ನಟ ದರ್ಶನ್​ ವಿರುದ್ಧ ಫಿಲಂ ಚೇಂಬರ್​ಗೆ ದೂರು ನೀಡಿದ ಕರ್ನಾಟಕ‌ ಪ್ರಜಾಪರ ವೇದಿಕೆ..!

ನಿರ್ಮಾಪಕ ಉಮಾಪತಿ ಮತ್ತು ನಟ ದರ್ಶನ್ನಡುವಿನ ಕಿರಿಕ್​ ಈಗ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ‘ಕಾಟೇರ’  ಹಾಗೂ ‘ರಾಬರ್ಟ್​’ ಸಿನಿಮಾಗಳ ಕಥೆ-ಟೈಟಲ್​ ವಿಚಾರಕ್ಕೆ ಸಂಬಂಧಿಸಿದಂತೆ ಒಂದಷ್ಟು ಗೊಂದಲಗಳು ಕೂಡ ಮೂಡಿವೆ.

ಇದೀಗ​ ನಟ ದರ್ಶನ್​ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ. ಕರ್ನಾಟಕ‌ ಪ್ರಜಾಪರ ವೇದಿಕೆ ದರ್ಶನ್ ಪದ ಬಳಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಇಂದು ಫಿಲಂ ಚೇಂಬರ್​ನಲ್ಲಿ ದೂರು ದಾಖಲಿಸಿದ್ದಾರೆ.

ನಿನ್ನೆ ಕಾಟೇರ ಸಿನಿಮಾ 50 ದಿನ ಪೂರೈಸಿದ ಸಂಭ್ರಮದ ವೇದಿಕೆ ಮೇಲೆ ನಿಂತು ದರ್ಶನ್ ತಗಡೇ,​ ಗುಮ್ಮುಸ್ಕೊತಿಯ ಎಂದು ನಿರ್ಮಾಪಕ ಉಮಾಪತಿ ವಿರುದ್ದ ಹೇಳಿಕೆ ನೀಡಿದ್ದರು. ಆದರೀಗ ಇದಕ್ಕೆ ಕ್ಷಮೆಯಾಚಿಸಬೇಕು ಅಂತ ಕರ್ನಾಟಕ ಪ್ರಜಾಪರ ವೇದಿಕೆ ಮನವಿ ಮಾಡಿದೆ. ಕರ್ನಾಟಕ ಪ್ರಜಾಪರ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಶಫಿ ಅವರಿಂದ ದೂರು ದಾಖಲಾಗಿದೆ.

ಸಾರ್ವಜನಿಕ ವೇದಿಕೆಯಲ್ಲಿ ನಿರ್ಮಾಪಕನಿಗೆ ತಗಡೇ, ಗುಮ್ಮುಸ್ಕೊತಿಯ ಪದ ಬಳಸಿದ್ದು ತಪ್ಪು. ದರ್ಶನ್ ಬಂಡವಾಳ ಗೊತ್ತಿದೆ ಸಾಕ್ಷಿ ಎಲ್ಲವೂ ಇದೆ. ಗುಮ್ಮುಸ್ಕೊತಿಯ ಅಂದ್ರೆ ಕೊಲೆ ಬೆದರಿಕೆ ಎಂದು ಕರ್ನಾಟಕ ಪ್ರಜಾಪರ ವೇದಿಕೆ ಹೇಳಿದೆ.

ನಟ ದರ್ಶನ್​ ಸೇರಿದಂತೆ ಕಾಟೇರ ಚಿತ್ರತಂಡ 50 ದಿನಗಳನ್ನು ಪೂರೈಸಿದ ಸಂತಸದಲ್ಲಿ ನಗರದ ಪ್ರಸನ್ನ ಥಿಯೇಟರ್​ನಲ್ಲಿ ಸಂಭ್ರಮಿಸಿದ್ದರು. ಈ ವೇಳೆ ವೇದಿಕೆ ಮೇಲೆ ದರ್ಶನ್​ ‘ಕಾಟೇರ’ ಟೈಟಲ್​ ಕುರಿತು ಮಾತನಾಡಿದ್ದರು. ನಿರ್ದೇಶಕ ಉಮಾಪತಿ ಕಾಟೇರ ಟೈಟಲ್​ ನನ್ನದು ಎಂದು ಹೇಳಿದ ಮಾತಿಗೆ ಕ್ಲಾರಿಟಿ ನೀಡಿದ ದರ್ಶನ್​ ತಗಡೇ, ಗುಮ್ಮುಸ್ಕೊತಿಯ ಎಂದು ಹೇಳಿದ್ದರು.

ಇದನ್ನೂ ಓದಿ : ಭಜರಂಗದಳದ ಪ್ರತಿರೋಧ ಎದುರಿಸಲು ಸಿದ್ಧರಾಗಿ – ಆರ್.ಅಶೋಕ್​​ಗೆ ಪುನೀತ್ ಅತ್ತಾವರ ಎಚ್ಚರಿಕೆ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here