Download Our App

Follow us

Home » ರಾಜ್ಯ » 20 ವರ್ಷದಿಂದ ತಲೆ ಮರೆಸಿಕೊಂಡಿದ್ದ ಕರ್ನಾಟಕದ ಮೋಸ್ಟ್ ವಾಂಟೆಡ್‌ ಭೂಗತ ನಕ್ಸಲ್ ಸುರೇಶ್​​ ಅರೆಸ್ಟ್..!

20 ವರ್ಷದಿಂದ ತಲೆ ಮರೆಸಿಕೊಂಡಿದ್ದ ಕರ್ನಾಟಕದ ಮೋಸ್ಟ್ ವಾಂಟೆಡ್‌ ಭೂಗತ ನಕ್ಸಲ್ ಸುರೇಶ್​​ ಅರೆಸ್ಟ್..!

ಚಿಕ್ಕಮಗಳೂರು : ಕರ್ನಾಟಕದ ಮೋಸ್ಟ್ ವಾಂಟೆಡ್‌ ಭೂಗತ ನಕ್ಸಲ್ ಸುರೇಶ್​ನನ್ನು ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ನಕ್ಸಲ್ ಸುರೇಶ್ ಗಾಯಗೊಂಡಿದ್ದ. ಹೀಗಾಗಿ ಸುರೇಶ್​ಗೆ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಿಚಾರ ಇಳಿದು ದಾಳಿ ನಡೆಸಿದ ಪೊಲೀಸರು ಸುರೇಶ್​ನನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್, ಕಳೆದ 10 ವರ್ಷಗಳಿಂದ ಭೂಗತ ನಕ್ಸಲ್ ಆಗಿದ್ದಾನೆ. ಪೊಲೀಸ್ ಇಲಾಖೆ, ಸುರೇಶ್ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಕೇರಳ ಕರ್ನಾಟಕ ಗಡಿ ಪ್ರದೇಶದ ಅರಣ್ಯದಲ್ಲಿ ಸುರೇಶ್ ಅಡಗಿದ್ದ.  ಸುರೇಶ್ ವಿರುದ್ಧ ಚಿಕ್ಕಮಗಳೂರು ಉಡುಪಿಯ ಶಿವಮೊಗ್ಗ ಜಿಲ್ಲೆಯಲ್ಲಿ ಕೇಸ್ ದಾಖಲಾಗಿವೆ. 10 ಕ್ಕೂ ಅಧಿಕ ಪ್ರಕರಣಗಳಲ್ಲಿ ಸುರೇಶ್ ಪೊಲೀಸರಿಗೆ ಬೇಕಾಗಿರುವ ಆರೋಪಿಯಾಗಿದ್ದ.

ಇದನ್ನೂ ಓದಿ : ರಾಜಕೀಯಕ್ಕೆ ಡಾಲಿ ಧನಂಜಯ್​ ಎಂಟ್ರಿ? ಮೈಸೂರು ಲೋಕಸಭಾ ಕ್ಷೇತ್ರದಿಂದ ಪ್ರತಾಪ್‌ ಸಿಂಹಗೆ ಎದುರಾಳಿ ಆಗ್ತಾರಾ ಖ್ಯಾತ ನಟ?

Leave a Comment

DG Ad

RELATED LATEST NEWS

Top Headlines

ವಾಹನ ಸವಾರರೇ ಹುಷಾರ್… ಇನ್ಮುಂದೆ 130km ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸಿದರೆ ಬೀಳುತ್ತೆ ಎಫ್‌ಐಆರ್‌..!

ಬೆಂಗಳೂರು : ಇನ್ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಅಂತವರ ವಿರುದ್ಧ FIR ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ

Live Cricket

Add Your Heading Text Here