Download Our App

Follow us

Home » ಮೆಟ್ರೋ » KAS ಅಧಿಕಾರಿ ಶಿವಕುಮಾರ್ ಪತ್ನಿ ಆತ್ಮಹ*ತ್ಯೆ..!

KAS ಅಧಿಕಾರಿ ಶಿವಕುಮಾರ್ ಪತ್ನಿ ಆತ್ಮಹ*ತ್ಯೆ..!

ಬೆಂಗಳೂರು : ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್‌ ವಕೀಲರಾದ ಚೈತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಜಯ್​ನಗರ ನಿವಾಸದಲ್ಲಿ ನಡೆದಿದೆ.

ಮೃತ ಚೈತ್ರಾ ವೃತ್ತಿಯಲ್ಲಿ ವಕೀಲರಾಗಿದ್ದು, ಮಾಡಲಿಂಗ್ ಮತ್ತು ಕ್ರೀಡೆಯಲ್ಲಿ ಗುರುತಿಸಿಕೊಂಡಿದ್ದರು. 2016ರಲ್ಲಿ KAS ಅಧಿಕಾರಿ ಶಿವಕುಮಾರನ್ನು ಮದುವೆಯಾಗಿದ್ದರು. ಆದರೆ ಇಂದು ಚೈತ್ರಾ ಶವ ಬೆಡ್​​ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈಗಾಗಲೇ ಚೈತ್ರಾ ಮೃತದೇಹವನ್ನು M.S.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ಮೃತ ಚೈತ್ರಾ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಮೇರೆಗೆ ಪೊಲೀಸರು ತನಿಖೆ ಮುಂದುವರಿಸಿದ್ದು, ಚೈತ್ರಾ ಕುಟುಂಬಸ್ಥರು ಶಿವಕುಮಾರ್ ಮೇಲೆ ಆರೋಪ ಮಾಡಿದ್ದಾರೆ.

ಇದನ್ನೂ ಓದಿ : ಕೋಲಾರದಲ್ಲಿ ಹೆಣ್ಣು ಭ್ರೂಣ ಹ*ತ್ಯೆ – ಮಾಲೂರಿನ ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here