ಬೆಂಗಳೂರು : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ ಮಾಡಿ ಕೊಂಡಿದ್ದ KEA ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ರಮ್ಯಾ ಅವರ ಜಾಗಕ್ಕೆ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಹೆಚ್. ಪ್ರಸನ್ನ ಅವರನ್ನು ನೇಮಿಸಲಾಗಿದೆ.
ಸಿಇಟಿ ಪರೀಕ್ಷೆಯ ಎಡವಟ್ಟಿಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡವಾಗಿದೆ. ಸಿಇಟಿ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿದ್ದು ಭಾರೀ ಆಕ್ರೋಶ, ಪ್ರತಿಭಟನೆಗೆ ಕಾರಣವಾಗಿತ್ತು.
ಇದ್ರಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಪೋಷಕರು ರಮ್ಯಾ ವರ್ಗಾವಣೆಗೆ ಒತ್ತಾಯ ಮಾಡಿದ್ರು. ಅಂತಿಮವಾಗಿ ರಾಜ್ಯ ಸರ್ಕಾರ ನಿನ್ನೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ಎತ್ತಂಗಡಿ ಮಾಡಿದೆ.
ಇದನ್ನೂ ಓದಿ : ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರ ಜೂನ್ 14 ರಂದು ತೆರೆಗೆ..!
Post Views: 34