ದೆಹಲಿ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ. ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಕಳೆದ ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಇಂದು ಸುಪ್ರೀಂಕೋರ್ಟ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಜೂನ್ 1ರವರೆಗೂ ಕೋರ್ಟ್ ಜಾಮೀನು ನೀಡಿದ್ದು, ಜೂನ್ 2 ರಂದು ಕೋರ್ಟ್ ಮುಂದೆ ಹಾಜರಾಗಲು ಸೂಚನೆ ನೀಡಿದೆ.
ಲೋಕಸಭೆ ಎಲೆಕ್ಷನ್ ಪ್ರಚಾರದಲ್ಲಿ ಪಾಲ್ಗೊಳ್ಳಲು ಕೋರ್ಟ್ ಅವಕಾಶ ನೀಡಿದೆ. ಕೇಜ್ರಿವಾಲ್ ಬೇಲ್ಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇದೀಗ ದೆಹಲಿ ಸಿಎಂ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಇನ್ನು 21 ದಿನಗಳ ಕಾಲ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳಬಹುದು, ಈ ಅವಧಿಯಲ್ಲಿ ಮುಖ್ಯಮಂತ್ರಿ ಜವಾಬ್ದಾರಿಯನ್ನ ನಿರ್ವಹಿಸುವಂತಿಲ್ಲ. ಚುನಾವಣಾ ಪ್ರಚಾರದಲ್ಲಿ ಮಾತ್ರ ಪಾಲ್ಗೊಳ್ಳಲು ಅವಕಾಶವಿದ್ದು, ಆಡಳಿತಾತ್ಮಕ ನಿರ್ಧಾರ ಮಾಡಿದ್ರೆ ಬೇಲ್ ಕ್ಯಾನ್ಸಲ್ ಆಗಲಿದೆ ಎಂದು ಕೋರ್ಟ್ ಸೂಚನೆ ನೀಡಿದೆ.
ಇದನ್ನೂ ಓದಿ : ರಾಜ್ಯದ ಪ್ರತಿ ಗೃಹಿಣಿಯರನ್ನು ಸಂಭ್ರಮಿಸೋಕೆ ಬಹುಮಾನಗಳನ್ನು ಹೊತ್ತು ಬರ್ತಿದೆ “ಸುವರ್ಣ ಗೃಹಮಂತ್ರಿ” ರಿಯಾಲಿಟಿ ಶೋ..!