ಚಿತ್ರದುರ್ಗ : ಖಾಸಗಿ ಬಸ್ವೊಂದನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಯಕನಹಟ್ಟಿ ಮೂಲದ SRE ಬಸ್ ಮಾಲೀಕ ಸಯ್ಯದ್ ಅನ್ವರ್ ಬಾಷ ಅವರಿಗೆ ಸೇರಿದ ಬಸ್ನ್ನು ಕಳ್ಳತನ ಮಾಡಲಾಗಿದೆ.
ಚಿತ್ರದುರ್ಗ- ಚಳ್ಳಕೆರೆ- ಜಗಳೂರು ಮಾರ್ಗದಲ್ಲಿ ಬಸ್ ಓಡಾಟ ನಡೆಸುತ್ತಿತ್ತು. ರಾತ್ರಿ ವೇಳೆ ಚಿತ್ರದುರ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಇರುತ್ತಿತ್ತು. ಇದನ್ನೇ ಹೊಂಚು ಹಾಕಿದ್ದ ಖತರ್ನಾಕ್ ಕಳ್ಳರು, ಬಸ್ಸನ್ನೇ ಕದ್ದು ಎಸ್ಕೇಪ್ ಆಗಿದ್ದಾರೆ. ಇನ್ನೂ ದಾವಣಗೆರೆ ಮಾರ್ಗವಾಗಿ, ಹುಬ್ಬಳ್ಳಿ ಕಡೆ ಬಸ್ ಕದ್ದೋಯ್ದಿರುವ ಶಂಕೆ ಇದ್ದು, ಪೊಲೀಸರು ಕಳ್ಳರ ಬೆನ್ನಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ನಗರ ಠಾಣೆ ಸಿಪಿಐ ತಿಪ್ಪೇಸ್ವಾಮಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಕಳ್ಳರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಇನ್ನೂ ಬಸ್ ಕಳ್ಳತನ ಮಾಡಿರುವ ಕಳ್ಳರ ಕಳ್ಳಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ : ವಿಧಾನಸಭೆಯಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ..!
Post Views: 263