Download Our App

Follow us

Home » ಅಪರಾಧ » ಚಿತ್ರದುರ್ಗದಲ್ಲಿ ಖಾಸಗಿ ಬಸ್ಸನ್ನೇ ಕದ್ದು ಎಸ್ಕೇಪ್ ಆಗಿರೋ ಖತರ್ನಾಕ್ ಕಳ್ಳರು..!

ಚಿತ್ರದುರ್ಗದಲ್ಲಿ ಖಾಸಗಿ ಬಸ್ಸನ್ನೇ ಕದ್ದು ಎಸ್ಕೇಪ್ ಆಗಿರೋ ಖತರ್ನಾಕ್ ಕಳ್ಳರು..!

ಚಿತ್ರದುರ್ಗ : ಖಾಸಗಿ ಬಸ್​​ವೊಂದನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಯಕನಹಟ್ಟಿ ಮೂಲದ SRE ಬಸ್ ಮಾಲೀಕ ಸಯ್ಯದ್ ಅನ್ವರ್ ಬಾಷ ಅವರಿಗೆ ಸೇರಿದ ಬಸ್​​ನ್ನು ಕಳ್ಳತನ ಮಾಡಲಾಗಿದೆ.

ಚಿತ್ರದುರ್ಗ- ಚಳ್ಳಕೆರೆ- ಜಗಳೂರು ಮಾರ್ಗದಲ್ಲಿ ಬಸ್ ಓಡಾಟ ನಡೆಸುತ್ತಿತ್ತು. ರಾತ್ರಿ ವೇಳೆ ಚಿತ್ರದುರ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಇರುತ್ತಿತ್ತು. ಇದನ್ನೇ ಹೊಂಚು ಹಾಕಿದ್ದ ಖತರ್ನಾಕ್ ಕಳ್ಳರು, ಬಸ್ಸನ್ನೇ ಕದ್ದು ಎಸ್ಕೇಪ್ ಆಗಿದ್ದಾರೆ. ಇನ್ನೂ ದಾವಣಗೆರೆ ಮಾರ್ಗವಾಗಿ, ಹುಬ್ಬಳ್ಳಿ ಕಡೆ ಬಸ್ ಕದ್ದೋಯ್ದಿರುವ ಶಂಕೆ ಇದ್ದು, ಪೊಲೀಸರು ಕಳ್ಳರ ಬೆನ್ನಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ನಗರ ಠಾಣೆ ಸಿಪಿಐ ತಿಪ್ಪೇಸ್ವಾಮಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಕಳ್ಳರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಇನ್ನೂ ಬಸ್ ಕಳ್ಳತನ ಮಾಡಿರುವ ಕಳ್ಳರ ಕಳ್ಳಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ : ವಿಧಾನಸಭೆಯಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here