ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿಯಾಗಿದೆ. ಹರಿಶ್ಚಂದ್ರ ಘಾಟ್ ಬಳಿ ಬಿಎಂಟಿಸಿ ಬಸ್ ಹರಿದು ಇಂಜಿನಿಯರ್ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿ ಕುಸುಮಿತಾ(21) ಮೃತ ದುರ್ದೈವಿಯಾಗಿದ್ದು ಅಪಘಾತದಿಂದ ವಿದ್ಯಾರ್ಥಿಗೆ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು ಅವಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಪ್ರಾಣ ಹೋಗಿದೆ.
ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಸುಮಿತಾ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಹರಿಶ್ಚಂದ್ರ ಘಾಟ್ ಬಳಿ ಈ ಘಟನೆ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಕುಸುಮಿತಾ ಓದುತ್ತಿದ್ದಳು. ಮಲ್ಲೇಶ್ವರಂ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿದೆ. KC ಜನರಲ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು, ಬಿಎಂಟಿಸಿ ಡ್ರೈವರ್ ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿದೆ ನಿಮ್ಮ ಎಕ್ಸ್ ಗರ್ಲ್ ಫ್ರೆಂಡ್ನ ನೆನಪಿಸುವ ಚಾಟ್ ಸೆಂಟರ್ – ವೈರಲ್ ಬೋರ್ಡ್ನಲ್ಲಿ ಏನಿದೆ ನೋಡಿ..!