ಬೆಂಗಳೂರು : ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಗೆ ವಿಶೇಷ ಚೇತನ ಯುವಕ ಬಲಿಯಾಗಿರುವ ಘಟನೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜರುಗಿದೆ. ರಾತ್ರಿ 12.15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಬಸ್ ನಿಲ್ದಾಣದಲ್ಲಿ ವಿಶೇಷ ಚೇತನ ಯುವಕ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಅತಿವೇಗದಿಂದ ಬಿಎಂಟಿಸಿ ಬಸ್ ಬಂದಿದೆ. ಬಳಿಕ ನಿಯಂತ್ರಣಕ್ಕೆ ಸಿಗದೇ ಯುವಕನ ಮೇಲೆ ಬಸ್ ಮುಂದಿನ ಚಕ್ರ ಹರಿದಿದೆ.
ಕೆಎ 57 ಎಫ್ 4330 ನಂಬರ್ ನ ಬಿಎಂಟಿಸಿ ಬಸ್ ಇದಾಗಿದ್ದು, ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಮೃತ ಯುವಕನ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಅಲ್ಲದೇ ಬಿಎಂಟಸಿ ಬಸ್ ಚಾಲಕ ಗೋಪಾಲಯ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಬಸ್ಸುಗಳು ನಿಲ್ದಾಣದ ಎಂಟ್ರಿ ಪಾಯಿಂಟ್ನಲ್ಲಿ ಅತೀ ವೇಗದಿಂದ ಬರುವ ಕಾರಣದಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ : ಧಾರವಾಡ : ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ತೀವ್ರ ಹೃದಯಾಘಾತವಾಗಿ ಪ್ರಯಾಣಿಕ ಸಾವು..!