Download Our App

Follow us

Home » ಮೆಟ್ರೋ » ಕಿಲ್ಲರ್ BMTCಗೆ ಮತ್ತೊಂದು ಬಲಿ – ತಡರಾತ್ರಿ ಮೆಜೆಸ್ಟಿಕ್​ನಲ್ಲಿ ಬಸ್ ಹರಿದು ವಿಶೇಷ ಚೇತನ ಯುವಕ ಸಾವು..!

ಕಿಲ್ಲರ್ BMTCಗೆ ಮತ್ತೊಂದು ಬಲಿ – ತಡರಾತ್ರಿ ಮೆಜೆಸ್ಟಿಕ್​ನಲ್ಲಿ ಬಸ್ ಹರಿದು ವಿಶೇಷ ಚೇತನ ಯುವಕ ಸಾವು..!

ಬೆಂಗಳೂರು : ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಗೆ ವಿಶೇಷ ಚೇತನ ಯುವಕ ಬಲಿಯಾಗಿರುವ ಘಟನೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜರುಗಿದೆ. ರಾತ್ರಿ‌ 12.15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಬಸ್ ನಿಲ್ದಾಣದಲ್ಲಿ ವಿಶೇಷ ಚೇತನ ಯುವಕ ನಡೆದುಕೊಂಡು ಹೋಗುತ್ತಿದ್ದ. ಈ‌ ವೇಳೆ ಅತಿವೇಗದಿಂದ ಬಿಎಂಟಿಸಿ ಬಸ್ ಬಂದಿದೆ. ಬಳಿಕ ನಿಯಂತ್ರಣಕ್ಕೆ ಸಿಗದೇ ಯುವಕನ ಮೇಲೆ ಬಸ್ ಮುಂದಿನ ಚಕ್ರ ಹರಿದಿದೆ.

ಕೆಎ 57 ಎಫ್ 4330 ನಂಬರ್ ನ ಬಿಎಂಟಿಸಿ‌ ಬಸ್ ಇದಾಗಿದ್ದು, ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಮೃತ ಯುವಕನ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಅಲ್ಲದೇ ಬಿಎಂಟಸಿ ಬಸ್ ಚಾಲಕ ಗೋಪಾಲಯ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಬಸ್ಸುಗಳು ನಿಲ್ದಾಣ‌ದ ಎಂಟ್ರಿ ಪಾಯಿಂಟ್​ನಲ್ಲಿ ಅತೀ ವೇಗದಿಂದ ಬರುವ ಕಾರಣದಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಇದನ್ನೂ ಓದಿ : ಧಾರವಾಡ : ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ತೀವ್ರ ಹೃದಯಾಘಾತವಾಗಿ ಪ್ರಯಾಣಿಕ ಸಾವು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನ M.S.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾಗಿರುವ M.S.ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು, ಆಸ್ಪತ್ರೆ ಸಿಬ್ಬಂದಿಗೆ ತೀವ್ರ

Live Cricket

Add Your Heading Text Here