ಕೋಲಾರ : ಶ್ರೀರಾಮನ ಕಟೌಟ್ ಹಾಗೂ ಫ್ಲೆಕ್ಸ್ನ್ನು ದುಷ್ಕರ್ಮಿಗಳು ಬ್ಲೇಡ್ನಿಂದ ಹರಿದ ಘಟನೆ ಕೋಲಾರದ ಮುಳಬಾಗಿಲು ಪಟ್ಟಣದ ಗುಣಗಂಟೆಪಾಳ್ಯದಲ್ಲಿ ನಡೆದಿದೆ. ಬ್ಯಾನರ್ ಹರಿದು ಹಾಕಿರೋದಕ್ಕೆ ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ. ಕಳೆದ ರಾತ್ರಿ 10.44ರ ಸುಮಾರಿಗೆ ಕಿಡಿಗೇಡಿಗಳು ಫ್ಲೆಕ್ಸ್ಗಳಿಗೆ ಬ್ಲೇಡ್ ಹಾಕಿ ಹರಿದಿದ್ದಾರೆ.
ಜನವರಿ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಲವಕುಶ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ಪುತ್ರ ಅಯೋಧ್ಯೆ ಧ್ರುವ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ ರಾಮನ ಶೋಭಾಯಾತ್ರೆ, ಸೀತರಾಮ ಕಲ್ಯಾಣೋತ್ಸವ ಮತ್ತು ಮಹಾಸಾಮ್ರಾಜ್ಯ ಪಟ್ಟಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಿನಾಂಕ 21 ಮತ್ತು 22 ರಂದು ಎರಡು ದಿನ ಈ ಕಾರ್ಯಕ್ರಮಗಳು ನಡೆಯಲಿದ್ದವು.
ಹೀಗಾಗಿ ನಗರದಲ್ಲಿ ಬ್ಯಾನರ್ ಮತ್ತು ಶ್ರೀರಾಮ ಕಟೌಟ್ ನಿಲ್ಲಿಸಲಾಗಿತ್ತು. ಈ ಬ್ಯಾನರ್ ಮತ್ತು ಕಟ್ಔಟ್ಗಳನ್ನು ನಿನ್ನೆ ರಾತ್ರಿ 10.44ರ ಸುಮಾರಿಗೆ ಯಾರೋ ದುಷ್ಕರ್ಮಿಗಳು ಬ್ಲೇಡ್ನಿಂದ ಹರಿದು ಹಾಕಿದ್ದಾರೆ. ಶ್ರೀರಾಮನ ಕಟೌಟ್ನ್ನು ಹರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಶ್ರೀರಾಮನ ಭಕ್ತರು ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದಕ್ಕಾಗಿ ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಪ್ರೊಟೆಸ್ಟ್ ಮಾಡಿದ್ದಾರೆ. ಈ ಪ್ರತಿಭಟನೆಗೆ ಸಂಸದ ಎಸ್.ಮುನಿಸ್ವಾಮಿ ಸೇರಿ ಹಲವರು ಸಾಥ್ ನೀಡಿದ್ದಾರೆ. ಮುಳಬಾಗಿಲು ನಗರ ಪೊಲೀಸರ ಭೇಟಿ ನೀಡಿ CCTV ಪರಿಶೀಲನೆ ಮಾಡಿದ್ದಾರೆ. ಮುಳಬಾಗಿಲು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಆಧಾರ್ ಕಾರ್ಡ್ ಮತ್ತು ಫಿಂಗರ್ ಪ್ರಿಂಟ್ ಬಳಸಿ ಬ್ಯಾಂಕ್ನಲ್ಲಿದ್ದ ಹಣ ವಂಚನೆ ಕೇಸ್ : ಆರೋಪಿಗಳು ಅರೆಸ್ಟ್..!