Download Our App

Follow us

Home » ಸಿನಿಮಾ » ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ – ಸಿನಿಮಾ ನೋಡಿ ದುಬೈ ಕನ್ನಡಿಗರು ಫಿದಾ..!

ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ – ಸಿನಿಮಾ ನೋಡಿ ದುಬೈ ಕನ್ನಡಿಗರು ಫಿದಾ..!

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಶ್ರೀನಿವಾಸ್ ರಾಜು ಕಾಂಬಿನೇಷನ್‌ನ “ಕೃಷ್ಣಂ ಪ್ರಣಯ ಸಖಿ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ಸಂದರ್ಭದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ ಈ ಯಶಸ್ವಿ ಚಿತ್ರ ಅಬುದಾಬಿ ಹಾಗೂ ದುಬೈನಲ್ಲೂ ಪ್ರದರ್ಶನಗೊಂಡಿದೆ. ಅಲ್ಲಿನ ಕನ್ನಡಿಗರು ಅಪ್ಪಟ ಮನೋರಂಜನೆಯ ಈ ಚಿತ್ರಕ್ಕೆ ಫಿದಾ ಆಗಿದ್ದಾರೆ.

ಇತ್ತೀಚೆಗೆ ದುಬೈನಲ್ಲಿ ರಶ್ಮಿ ವೆಂಕಟೇಶ್, ಸೆಂದಿಲ್ ಮತ್ತು ತಂಡದವರು “ಕೃಷ್ಣಂ ಪ್ರಣಯ ಸಖಿ” ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಿದ್ದರು. ಗೋಲ್ಡನ್ ಸ್ಟಾರ್ ಗಣೇಶ್, ನಾಯಕಿ ಮಾಳವಿಕ ನಾಯರ್, ನಟ ರಂಗಾಯಣ ರಘು, ನಿರ್ದೇಶಕ ಶ್ರೀನಿವಾಸರಾಜು, ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ ಸೇರಿದಂತೆ ಚಿತ್ರತಂಡದ ಸದಸ್ಯರು ಈ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ್ದರು.

ಸುಮಾರು 750ಕ್ಕೂ ಅಧಿಕ ಕನ್ನಡಿಗರು ಈ ಚಿತ್ರವನ್ನು ನೋಡಿ ಸಂಭ್ರಮಿಸಿದರು. ಚಿತ್ರದ ಹಾಡುಗಳಿಗೆ ಹೆಜ್ಜೆ ಹಾಕಿದರು. ನಮ್ಮ ಚಿತ್ರಕ್ಕೆ ನೀವು ನೀಡುತ್ತಿರುವ ಪ್ರೋತ್ಸಾಹಕ್ಕೆ ಮನ ತುಂಬಿ ಬಂದಿದೆ ಎಂದು ನಾಯಕ ಗೋಲ್ಡನ್ ಸ್ಟಾರ್ ಗಣೇಶ್ ಈ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ : ನ್ಯೂಯಾರ್ಕ್ ನಲ್ಲಿ ಶ್ರಾವಣ ಅಮಾವಾಸ್ಯೆ ಸಂಭ್ರಮ.. ಪೂಜ್ಯ ಜಗದ್ಗುರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾರಥ್ಯದಲ್ಲಿ ಶ್ರಾವಣ ಪೂಜಾ ಮಹೋತ್ಸವ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here