ಯಾದಗಿರಿ : ಕೆಎಸ್ಆರ್ಟಿಸಿ ಬಸ್ ಟಯರ್ ಸ್ಪೋಟಗೊಂಡು ಸರಣಿ ಅಪಘಾತ ಸಂಭವಿಸಿದ ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಸಾರಿಗೆ ಬಸ್ ಹೈದ್ರಾಬಾದ್ನ ನಾರಾಯಣಪೇಟೆಯಿಂದ ಸೈದಾಪುರ ಕಡೆಗೆ ಬರುತ್ತಿದ್ದ ವೇಳೆ ಟಯರ್ ಸ್ಪೋಟಗೊಂಡಿದೆ. ಟಯರ್ ಸ್ಪೋಟ ಆಗುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ಸಿಗದೇ ರಸ್ತೆ ಬದಿಯ ಹಣ್ಣಿನ ಅಂಗಡಿ ಹಾಗೂ ಮರಕ್ಕೆ ಡಿಕ್ಕಿ ಹೊಡೆದಿದೆ.
ಇದೇ ವೇಳೆ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಟ್ಯಾಂಕರ್ ವಾಹನ ಕೂಡ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೃಹತ್ ಮರವೊಂದು ಬೇರು ಸಮೇತ ಟ್ಯಾಂಕರ್ ವಾಹನದ ಮೇಲೆ ಬಿದ್ದಿದೆ. ಸಾರಿಗೆ ಬಸ್, ಟ್ಯಾಂಕರ್ ಅಪಘಾತದ ಮಧ್ಯೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಎರಡು ಬೈಕ್ಗಳು ಕೂಡ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಘಟನಾ ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ : ಕ್ಯಾಂಟರ್ ಟೈರ್ಗೆ ಸಿಲುಕಿ 4 ವರ್ಷದ ಬಾಲಕ ಸಾ*ವು..!