ಮಂಡ್ಯ : ಲೋಕಸಭಾ ಚುನಾವಣೆಯ ಫಲಿತಾಂಶ ರಣರೋಚಕವಾಗಿದ್ದು, ದೇಶಾದ್ಯಂತ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದೆ. ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋ ಕುತೂಹಲ ಮುಗಿಲು ಮುಟ್ಟಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗಿಂತ 1 ಲಕ್ಷಕ್ಕಿಂತಲೂ ಹೆಚ್ಚು ಮುನ್ನಡೆ ಕಾಯ್ದುಕೊಂಡಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ಭಾರಿ ಮುನ್ನಡೆ ಹಿನ್ನಲೆ ಕುಮಾರಸ್ವಾಮಿ ಮಂಡ್ಯದತ್ತ ಆಗಮಿಸ್ತಿದ್ದಾರೆ. ಮಂಡ್ಯದಲ್ಲಿ ಕುಮಾರಸ್ಚಾಮಿ ಗೆಲುವು ಸನಿಹಕ್ಕೆ ಬಂದಿದ್ದು, ಗೆಲುವು ಖಚಿತವಾಗುತ್ತಿದ್ದಂತೆ ಬಿಡದಿಯ ತೋಟದ ಮನೆಯಿಂದ ಹೆಚ್ಡಿಕೆ ಮಂಡ್ಯದತ್ತ ಆಗಮಿಸುತ್ತಿದ್ದಾರೆ.
ಕುಮಾರಸ್ವಾಮಿ ಗೆಲುವು ಖಚಿತವಾಗ್ತಿದ್ದಂತೆ ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯುತ್ತಿದೆ. ಹೆಚ್ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಜೊತೆ ಮಂಡ್ಯಕ್ಕೆ ಆಗಮಿಸ್ತಿದ್ದಾರೆ.
ಇದನ್ನೂ ಓದಿ : ಲೋಕಸಭೆ ಫಲಿತಾಂಶ : ಚಿಕ್ಕಬಳ್ಳಾಪುರ ಕ್ಷೇತ್ರದದಲ್ಲಿ ಮುನ್ನಡೆ ಕಾಯ್ದುಕೊಂಡ ಡಾ.ಕೆ.ಸುಧಾಕರ್..!