Download Our App

Follow us

Home » ರಾಜಕೀಯ » ಕುಮಾರಸ್ವಾಮಿ ಹಾರ್ಟ್​ ಆಪರೇಷನ್ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್​ ಶಾಸಕ ರಮೇಶ್ ಬಂಡಿಸಿದ್ದೇಗೌಡ..!

ಕುಮಾರಸ್ವಾಮಿ ಹಾರ್ಟ್​ ಆಪರೇಷನ್ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್​ ಶಾಸಕ ರಮೇಶ್ ಬಂಡಿಸಿದ್ದೇಗೌಡ..!

ಮಂಡ್ಯ : ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದನ್ನು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಬಂದಾಗಲೆಲ್ಲ ಕುಮಾರಸ್ವಾಮಿಗೆ ಹೃದಯದ ಸಮಸ್ಯೆ ಎದುರಾಗುವುದು, ಆಸ್ಪತ್ರೆಗೆ ದಾಖಲಾಗುವುದು ಮಾಮೂಲಿಯಾಗಿದೆ ಎಂದಿದ್ದಾರೆ.

ಆಸ್ಪತ್ರೆಯಿಂದ ಹೊರಬಂದ ಮೂರೇ ದಿನಕ್ಕೆ ಕುಮಾರಸ್ವಾಮಿ ಮತ್ತೆ ರಾಜ್ಯ ಸುತ್ತಾಡುತ್ತಿದ್ದಾರೆ. ಅದು ಹೇಗೆ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ ಎಂದು ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ. ಚುನಾವಣೆ ಇಲ್ಲದ ಸಮಯದಲ್ಲಿ ಸಹಜವಾಗಿಯೇ ಇರುವ ಕುಮಾರಸ್ವಾಮಿ ಚುನಾವಣೆ ಸಮೀಪಿಸುತ್ತಿದ್ದಂತೆ ಹೃದಯದ ಸಮಸ್ಯೆ ಎನ್ನುತ್ತಾರೆ. ಆಸ್ಪತ್ರೆಗೂ ದಾಖಲಾಗುತ್ತಾರೆ.  ನಂತರ ಎರಡೇ ದಿನಕ್ಕೆ ಮನೆಗೆ ಬಂದು ಮರುದಿನದಿಂದಲೇ ಎಲ್ಲೆಡೆ ಓಡಾಡುತ್ತಾರೆ ಎಂದು ಹೇಳಿದ್ದಾರೆ.

ನಮ್ಮ ಚೆಲುವರಾಯಸ್ವಾಮಿಗೂ ಇದೇ ರೀತಿ ಹೃದಯದ ಸಮಸ್ಯೆ ಇದೆ. ಆದರೆ ಅವರು ಆಸ್ಪತ್ರೆ ಸೇರಿದರೆ ತಿಂಗಳುಗಟ್ಟಲೆ ಹೊರಗೆ ಬರುವುದೇ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಇಂದು ಸಂಸದೆ ಸುಮಲತಾರಿಂದ ಮಹತ್ವದ ಸಭೆ : ಬಿಜೆಪಿ-ಜೆಡಿಎಸ್​ ಮೈತ್ರಿಗೆ ಕಂಟಕವಾಗ್ತಾರಾ?

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here