ಬೆಂಗಳೂರು : ಕುಂಬಳಗೋಡು ಪರ್ಫ್ಯೂಮ್ ಕಾರ್ಖಾನೆ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಸಜೀವದಹನಗೊಂಡು ಐವರು ಗಾಯಗೊಂಡಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಯಾನ್ ಪಾಷಾ ಎಂಬ ಬಾಲಕ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಗಾಯಗೊಂಡ ಐವರಲ್ಲಿ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಚಿಕಿತ್ಸೆ ಪಡೆಯುತ್ತಿರುವ ಮೂವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಬೆಂಗಳೂರು ನಗರದ ಹೊರವಲಯದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿತ್ತು.
ಪರ್ಫ್ಯೂಮ್ ಫಿಲ್ಲಿಂಗ್ ಮಾಡುವ ವೇಳೆ ಈ ಘಟನೆ ನಡೆದಿದ್ದು, ಮನೆಯೊಂದರಲ್ಲಿ ಪರ್ಫ್ಯೂಮ್ ಕಾರ್ಖಾನೆ ನಡೆಸಲಾಗುತ್ತಿತ್ತು. ಇಲ್ಲಿ ಒಟ್ಟು ಎಂಟು ಜನರು ಪರ್ಫ್ಯೂಮ್ ಫಿಲ್ಲಿಂಗ್ ಕೆಲಸ ಮಾಡುತ್ತಿದ್ದರು. ನೋಡ ನೋಡುತ್ತಿದ್ದಂತೆ ಬೆಂಕಿ ಆವರಿಸಿಕೊಂಡಿದ್ದು, ಅಲ್ಲಿಂದ ಹೊರಗೆ ಬರಲಾಗದೇ ಮೂವರು ಸಜೀವ ದಹನವಾಗಿದ್ದರು.
ಇದನ್ನೂ ಓದಿ : ಕಾಂಗ್ರೆಸ್ನಲ್ಲೂ ಮಂಡ್ಯ ಗೆಲ್ಲುವ ರಣತಂತ್ರ : ಬೆಂಗಳೂರಿನಲ್ಲಿ ಒಕ್ಕಲಿಗ ಕಾಂಗ್ರೆಸ್ ನಾಯಕರ ಸಭೆ..!