ಮಂಡ್ಯ : ರಾಜ್ಯದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಕಾವು ಜೋರಾಗಿದೆ. ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಹೆಚ್ಡಿಕೆ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.
ಸದ್ಯ ಮಾಹಿತಿ ಪ್ರಕಾರ ಕುಮಾರಸ್ವಾಮಿಗೆ 530453 ಸಿಕ್ಕಿವೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ 330412 ವೋಟ್ಗಳು ಬಿದ್ದಿವೆ. ಹೆಚ್ಡಿಕೆ ಗೆಲುವು ಪಕ್ಕಾ ಆಗಿದೆ. ಇನ್ನು ತನ್ನ ಗೆಲುವಿನ ವಿಚಾರ ಗೊತ್ತಾಗುತ್ತಿದ್ದಂತೆಯೇ ಆದಿಚುಂಚನಗಿರಿ ಮಹಾ ಸಂಸ್ಥಾನದ ವಿಜಯನಗರ ಶಾಖಾ ಮಠಕ್ಕೆ ಭೇಟಿ ನೀಡಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ.
ಇದನ್ನೂ ಓದಿ : ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಭರ್ಜರಿ ಗೆಲುವು..!
Post Views: 12