Download Our App

Follow us

Home » ರಾಜಕೀಯ » ಲೋಕಸಭೆ ಚುನಾವಣೆ : ಇಂದು ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ..!

ಲೋಕಸಭೆ ಚುನಾವಣೆ : ಇಂದು ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ..!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ ಕೆ ಸುರೇಶ್, ಇಂದು ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಆರಂಭದ ದಿನವೇ ನಾಮಪತ್ರ ಸಲ್ಲಿಸಲು ಡಿ.ಕೆ.ಸುರೇಶ್ ಅವರು ನಿರ್ಧಾರ ಮಾಡಿದ್ದಾರೆ.

ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದು, ಡಿ.ಕೆ.ಸುರೇಶ್ ಅವರ​ ನಾಮಪತ್ರ ಸಲ್ಲಿಕೆ ವೇಳೆ ಖುದ್ದು ಸಿಎಂ ಸಿದ್ದು ಸಾಥ್​​​ ನೀಡಲಿದ್ದಾರೆ. ರಾಮನಗರ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಗೃಹ ಸಚಿವ ಪರಮೇಶ್ವರ್ ಕೂಡಾ ಡಿ.ಕೆ.ಸುರೇಶ್​ಗೆ ಸಾಥ್​ ನೀಡಲಿದ್ದಾರೆ.

ಎಂಟು ಅಸೆಂಬ್ಲಿ ಕ್ಷೇತ್ರಗಳ ಶಾಸಕರೂ ರಾಮನಗರಕ್ಕೆ ತೆರಳಲಿದ್ದು, ನಾಯಕರು ಕಾರ್ಯಕರ್ತರ ದಂಡಿನ ಜತೆ ಆಗಮಿಸಲಿದ್ದಾರೆ. ಚುನಾವಣಾಧಿಕಾರಿ ಕಚೇರಿಗೆ ತೆರಳಲು ಡಿ.ಕೆ.ಸುರೇಶ್​ ಸೇರಿ ಐವರಿಗೆ  ಮಾತ್ರ ಅವಕಾಶ ಇರಲಿದೆ. ಸಂಸದ ಡಿ.ಕೆ. ಸುರೇಶ್​ ಅವರು ಹ್ಯಾಟ್ರಿಕ್ ಜಯ​​​​​​​​ ಬಾರಿಸಲು ಸಜ್ಜಾಗಿದ್ದಾರೆ. ಕರ್ನಾಟಕದಲ್ಲಿ ಮೊದಲ ಹಂತಕ್ಕೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಇದನ್ನೂ ಓದಿ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಸಾಬೀತು : ಮಂಡ್ಯ PWD ಇಇ H.R ಹರ್ಷ ಸಸ್ಪೆಂಡ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here