Download Our App

Follow us

Home » ರಾಜಕೀಯ » ಲೋಕಸಭೆ ಚುನಾವಣೆ : ಮಂಡ್ಯದಿಂದಲೇ ಹೆಚ್.​ಡಿ ಕುಮಾರಸ್ವಾಮಿ ಸ್ಪರ್ಧೆ..!

ಲೋಕಸಭೆ ಚುನಾವಣೆ : ಮಂಡ್ಯದಿಂದಲೇ ಹೆಚ್.​ಡಿ ಕುಮಾರಸ್ವಾಮಿ ಸ್ಪರ್ಧೆ..!

ಮಂಡ್ಯ : ಲೋಕಸಭೆ ಚುನಾವಣಾ ಅಖಾಡದಲ್ಲಿ ಮಂಡ್ಯ ಕ್ಷೇತ್ರ ತೀವ್ರ ಜಿದ್ದಾಜಿದ್ದಿಯ ಕಣವಾಗಿದೆ. ಈ ಬಾರಿಯೂ ಮಂಡ್ಯ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಡುವ ಸಾಧ್ಯತೆಗಳಿವೆ. ಬಿಜೆಪಿ ಜೊತೆ ಸೀಟು ಹಂಚಿಕೆ ಹಗ್ಗಜಗ್ಗಾಟದಲ್ಲಿ ಇದೀಗ ಜೆಡಿಎಸ್‌‌ ಜಯಶಾಲಿಯಾಗಿದ್ದು, ಬಿಜೆಪಿ ಹೈಕಮಾಂಡ್‌ ಮಂಡ್ಯ ಕ್ಷೇತ್ರವನ್ನ ಜೆಡಿಎಸ್‌ ಗೆ ಬಿಟ್ಟುಕೊಟ್ಟಿದೆ.

ಹೆಚ್.​ಡಿ ಕುಮಾರಸ್ವಾಮಿಯವರು ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ತೀವ್ರ ವಿರೋಧದ ನಡುವೆಯೂ ಮಂಡ್ಯದಿಂದ ಕಣಕ್ಕಿಳಿಯಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಮಂಡ್ಯ, ಕೋಲಾರ, ಹಾಸನದಲ್ಲಿ ಜೆಡಿಎಸ್ ಸ್ಪರ್ಧೆ ಮಾಡುವುದಾಗಿ ಕೋರ್​ ಕಮಿಟಿ ಸಭೆಯಲ್ಲಿ ಮಹತ್ವದ ತೀರ್ಮಾನವಾಗಿದೆ. ಕೋಲಾರದಿಂದ ಬಿಜೆಪಿ MP ಮುನಿಸ್ವಾಮಿಗೆ ಜೆಡಿಎಸ್ ಟಿಕೆಟ್​ ಸಿಗುವ ಸಾಧ್ಯತೆಯಿದೆ.

ಕೋರ್​ ಕಮಿಟಿ ಸಭೆ ಹೆಚ್.​ಡಿ ಕುಮಾರಸ್ವಾಮಿ ಮಾತನಾಡಿ, ಮಂಡ್ಯ ಜಿಲ್ಲೆಯ ಜನರು ನನ್ನನ್ನು ಬಯಸಿದ್ದಾರೆಂದು ಹೇಳಿದ್ದಾರೆ. ಹಾಗೆಯೇ ನಾನಾ ಕಾರಣಗಳನ್ನ ನೀಡಿ ಮಂಡ್ಯ ಸ್ಪರ್ಧೆ ಬಗ್ಗೆ ಹೆಚ್​ಡಿಕೆ ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ಮುನಿಸ್ವಾಮಿ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಹೆಚ್​ಡಿಕೆ ಸುಳಿವು ನೀಡಿದ್ದಾರೆ. ಜೆಡಿಎಸ್​ ಸಿಂಬಲ್​ನಲ್ಲೇ ಮುನಿಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. MP ಮುನಿಸ್ವಾಮಿಗೆ ಜೆಡಿಎಸ್​ ಟಿಕೆಟ್ ಬಗ್ಗೆ ಇಂದು ಸಂಜೆ 5 ಗಂಟೆಗೆ ಅಧಿಕೃತವಾಗಿ ಘೋಷಣೆಯಾಗಲಿದೆ.

ಇದನ್ನೂ ಓದಿ : ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

Leave a Comment

DG Ad

RELATED LATEST NEWS

Top Headlines

ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ” ಚಿತ್ರ ಆ.9ರಂದು ತೆರೆಗೆ..!

ನಿರ್ಮಾಪಕ ರಮೇಶ್ ರೆಡ್ಡಿ ಅವರು ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಬಹು ನಿರೀಕ್ಷಿತ “45”

Live Cricket

Add Your Heading Text Here