Download Our App

Follow us

Home » ರಾಜಕೀಯ » ಸಿದ್ದು ಮುಡಾ ಕೇಸ್​ ಬೆನ್ನಲ್ಲೇ ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್..!

ಸಿದ್ದು ಮುಡಾ ಕೇಸ್​ ಬೆನ್ನಲ್ಲೇ ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮುಡಾ ಕೇಸ್​ ಬೆನ್ನಲ್ಲೇ ಡಿಕೆಶಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸದ್ದು ಮಾಡುತ್ತಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಡಿಸಿಎಂ ಡಿಕೆಶಿಗೆ ನೋಟಿಸ್​ ನೀಡಿದ್ದಾರೆ.

CBIನಲ್ಲಿ ದಾಖಲಾಗಿದ್ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ  ಸರ್ಕಾರ ವಾಪಸ್ ಪಡೆದು ಲೋಕಾಯುಕ್ತ ತನಿಖೆಗೆ ವಹಿಸಿತ್ತು. ಇದೀಗ ತಕ್ಷಣ ವಿಚಾರಣೆಗೆ ಹಾಜರಾಗಲು ಡಿಕೆಶಿಗೆ ನೋಟಿಸ್ ನೀಡಲಾಗಿದ್ದು, ಸಂಪುಟ ಸಭೆ ಮುಗಿದ ನಂತರ ಡಿಕೆ ಶಿವಕುಮಾರ್ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಲಿದ್ದಾರೆ.

ಲೋಕಾಯುಕ್ತದಿಂದ ಈಗ ನೋಟಿಸ್ ಯಾಕೆ? ಇದೇ ವರ್ಷದ ಫೆಬ್ರವರಿಯಲ್ಲಿ ಡಿಕೆಶಿಯವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದ ಈ ಹಿಂದಿನ ರಾಜ್ಯ ಸರ್ಕಾರದ ನಿರ್ಧಾರವನ್ನು ಈಗಿನ ಸಿದ್ದರಾಮಯ್ಯನವರ ಸರ್ಕಾರ ಹಿಂಪಡೆದಿತ್ತು. ಸಿಬಿಐನಿಂದ ಹಿಂಪಡೆಯಲಾದ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಲಾಗಿತ್ತು. ಅದಾದ ನಂತರ, ಲೋಕಾಯುಕ್ತ ಸಂಸ್ಥೆಯು ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಆ ಹಿನ್ನೆಲೆಯಲ್ಲಿ ಈಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ : ಸಿಗರೇಟ್ ಹಚ್ಚಿ ಚೆಲ್ಲಿದ್ದ ಪೆಟ್ರೋಲ್ ಮೇಲೆ ಬೆಂಕಿ ಕಡ್ಡಿ ಎಸೆದ ಭೂಪ – ಅಲ್ಲಿದ್ದವರು ಬಚಾವ್ ಆಗಿದ್ದೇ ರೋಚಕ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here