Download Our App

Follow us

Home » ಅಪರಾಧ » ಬೆಂಗಳೂರಿನಲ್ಲೊಂದು ಲವ್, ಸೆಕ್ಸ್, ದೋಖಾ ಕಹಾನಿ – ಪತಿ ಬಿಟ್ಟು ಬಂದವಳಿಗೆ ನಂಬಿಸಿ ಮೋಸ ಮಾಡಿದ ಆಸಾಮಿ..!

ಬೆಂಗಳೂರಿನಲ್ಲೊಂದು ಲವ್, ಸೆಕ್ಸ್, ದೋಖಾ ಕಹಾನಿ – ಪತಿ ಬಿಟ್ಟು ಬಂದವಳಿಗೆ ನಂಬಿಸಿ ಮೋಸ ಮಾಡಿದ ಆಸಾಮಿ..!

ಬೆಂಗಳೂರು : ಪತಿಯನ್ನು ಬಿಟ್ಟು ಬಂದ ಮಹಿಳೆಗೆ ಕ್ಯಾಬ್ ಚಾಲಕನೋರ್ವ ಬಾಳು ಕೊಡ್ತೀನಿ ಎಂದು ನಂಬಿಸಿ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕ್ಯಾಬ್ ಚಾಲಕ ಪ್ರಜ್ವಲ್ ಎಂಬಾತ ವಿವಾಹಿತ ಮಹಿಳೆಗೆ ಬಾಳು ಕೊಡ್ತೀನಿ ಎಂದು ನಂಬಿಸಿ ಆಕೆಯ ಜೊತೆ ಕೆಲ ದಿನಗಳ ಕಾಲ ಒಟ್ಟಿಗೆ ಜೀವನ ನಡೆಸಿ ಆಕೆಯನ್ನು ಬಳಸಿಕೊಂಡು ಇದೀಗ ಬೋರಾದ್ಳು ಎಂದು ಬಿಟ್ಟು ಹೋಗಿದ್ದಾನೆ. ಘಟನೆ ಸಂಬಂಧ ಮಹಿಳೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನ್ಯಾಯಕ್ಕಾಗಿ ಅಂಗಲಾಚಿದ್ದಾಳೆ.

ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹಾಕುತ್ತಿದ್ದಳು. ಇದನ್ನು ಕಂಡ ಕ್ಯಾಬ್ ಚಾಲಕ ಪ್ರಜ್ವಲ್ ಆ ರೀಲ್ಸ್​ಗಳಿಗೆ ಲೈಕ್, ಕಮೆಂಟ್ ಮಾಡುತ್ತಿದ್ದ. ಮಹಿಳೆ ಕೂಡ ಆ ಕಮೆಂಟ್​ಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದಳು. ಹೀಗೆ ಇವರಿಬ್ಬರ ನಡುವೆ ಪರಿಚಯ ಬೆಳೆದು ಇಬ್ಬರೂ ಹತ್ತಿರವಾಗಿದ್ದರು. ಮೆಸೇಜ್ ಮಾಡ್ತಾ, ಮಾಡ್ತಾ ಪ್ರಜ್ವಲ್ ಮನೆವರೆಗೂ ಬಂದಿದ್ದ. ನಿನ್ನನ್ನೇ ಮದುವೆ ಆಗ್ತೀನೆಂದು ಒಟ್ಟಿಗೆ ವಾಸವಾಗಿದ್ದ. ಆದರೆ ಈಗ ಬೋರಾದ್ಳು ಅಂತಾ ಮೋಸ ಮಾಡಿ ಬಿಟ್ಟು ಹೋಗಿದ್ದಾನೆ. ಹೀಗಾಗಿ ಮಹಿಳೆ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಇನ್ನು ಮಹಿಳೆ 13 ವರ್ಷದ ಹಿಂದೆ ವ್ಯಕ್ತಿಯೊಬ್ಬನನ್ನ ವಿವಾಹವಾಗಿದ್ದಳು. ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಆಗಿದ್ರು. ಗಂಡ ಕುಡಿದು ಬಂದು ಪ್ರತಿದಿನ ಕಿರುಕುಳ ಕೊಡ್ತಿದ್ದಾನೆಂದು ಬಿಟ್ಟು ತವರು ಮನೆಗೆ ಬಂದಿದ್ದಳು. ಬಳಿಕ ಇತ್ತೀಚೆಗೆ ಒಂದು ವರ್ಷದಿಂದ ಪ್ರತ್ಯೇಕವಾಗಿ ಸ್ನೇಹಿತರ ಜೊತೆಗೆ ಬೆಂಗಳೂರಲ್ಲಿ ವಾಸವಿದ್ದಳು. ಆಗಾಗ ರೀಲ್ಸ್ ಮಾಡಿ ಸೊಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಿದ್ದಳು. ಆಕೆಯ ರೀಲ್ಸ್ ಗೆ ‘ಬ್ಯೂಟಿಫುಲ್’ ಎಂದು ಪ್ರಜ್ವಲ್ ಕಮೆಂಟ್ ಹಾಕಿದ್ದ. ಅದೇ ಕಮೆಂಟ್, ಮೆಸೇಜ್ ವರೆಗೂ ಬಂದಿತ್ತು.

ನಂತರ ಫೋನ್ ನಂಬರ್ ಎಕ್ಸ್ ಚೇಂಜ್ ಆಗಿ ಇಬ್ಬರು ಚಾಟಿಂಗ್ ಶುರು ಮಾಡಿದ್ರು. ಇಬ್ಬರು ಪರಸ್ಪರ ವೈಯಕ್ತಿಕ ವಿಚಾರ ಶೇರ್ ಮಾಡಿಕೊಳ್ತಿದ್ರು. ತನ್ನ ಜೀವನದ ಕಥೆಯನ್ನೆಲ್ಲ ಮಹಿಳೆ ಹೇಳಿಕೊಂಡಿದ್ದಳು. ನನಗೆ 13 ಹಾಗೂ 10 ವರ್ಷದ ಮಕ್ಕಳಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಳು. ಹೀಗಿದ್ದರೂ ಮದುವೆ ಆಗೋದಾಗಿ ಪ್ರಜ್ವಲ್ ನಂಬಿಕೆಯ ಮಾತುಗಳನ್ನಾಡಿದ್ದ ಎನ್ನಲಾಗಿದೆ. ಹೊಸ ಜೀವನ ಕಟ್ಟಿಕೊಳ್ಳೋಣ ಎಂದು ಹೇಳಿದ್ದ. ಅಷ್ಟರಲ್ಲಾಗಲೇ ಮಹಿಳೆ ಉಳಿದುಕೊಂಡಿದ್ದ ಮನೆಯಲ್ಲಿ ಸ್ನೇಹಿತರು ಮನೆ ಖಾಲಿ ಮಾಡಿದ್ರು.

ಕೆಂಗೇರಿ ಸಮೀಪದ ಮನೆಯಲ್ಲಿ ಮಹಿಳೆ ವಾಸವಿದ್ದಳು. ಅದೇ ಮನೆಯಲ್ಲಿ ಪ್ರಜ್ವಲ್ ಕೂಡ ಉಳಿದುಕೊಂಡಿದ್ದ. ಮಗನ್ನ ಹಾಸ್ಟೆಲ್ ನಲ್ಲಿ ಸೇರಿಸಿದ್ರೆ ಮಗಳನ್ನು ತನ್ನ ತಾಯಿ ಮನೆಯಲ್ಲಿ ಬಿಟ್ಟು ಇವರಿಬ್ಬರು ಒಟ್ಟಿಗೆ ಇದ್ದರು. ಕಳೆದ ಕೆಲ ದಿನಗಳಿಂದ ಮನೆಗೆ ಬರದೇ ಪ್ರಜ್ವಲ್ ಕಥೆ ಕಟ್ತಿದ್ದ. ವಿಚಾರಿಸಿದಾಗ ಮದುವೆ ಆಗಲ್ಲ ಎಂದು ಹೇಳಿದ್ದ. ಇದರಿಂದ ನೊಂದ ಮಹಿಳೆ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿ ನ್ಯಾಯಕ್ಕಾಗಿ ಅಂಗಲಾಚಿದ್ದಾಳೆ.

ಇದನ್ನೂ ಓದಿ : ಅದ್ದೂರಿಯಾಗಿ ಸೆಟ್ಟೇರಿತು ಜೂ.ಎನ್‌ಟಿಆರ್‌-ಪ್ರಶಾಂತ್‌ ನೀಲ್‌ ಕಾಂಬಿನೇಷನ್​​ನ ಹೊಸ ಸಿನಿಮಾ..!

 

 

 

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here