ಮಡಿಕೇರಿ : ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕೆದೆ. SSLC ಪಾಸ್ ಆದ ದಿನವೇ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ಆರೋಪಿ ಪ್ರಕಾಶ್ ಆತ್ಮಹತ್ಯೆಯ ವದಂತಿ ಹರಡಿತ್ತು. ಆದರೆ ತಡರಾತ್ರಿ ಸುಮಾರಿಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ರುಂಡ ಹಾಗೂ ಕೋವಿ ಸಮೇತ ಆರೋಪಿ ಪರಾರಿಯಾಗಿದ್ದ. ಕಾಡಿನಲ್ಲಿದ್ದ ಆತನನ್ನು ಸೋಮವಾರಪೇಟೆ ಪೊಲೀಸ್ ಠಾಣೆಗೆ ಪೊಲೀಸರು ಕರೆತಂದಿದ್ದಾರೆ.
ಆರೋಪಿ ಸೆರೆಯಾದರೂ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸೋಮವಾರಪೇಟೆ ಠಾಣೆಗೆ ಆರೋಪಿ ಪ್ರಕಾಶ್ನನ್ನು ಕರೆತಂದ ಪೋಲಿಸರು ರುಂಡ ಎಲ್ಲಿದೆ ಅನ್ನೋ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ರುಂಡಕ್ಕಾಗಿ 40 ಪೊಲೀಸರ ತಂಡದಿಂದ ಹುಡುಕಾಟ ನಡೆಯುತ್ತಿದೆ.
ಇದನ್ನೂ ಓದಿ : ಮೊದಲ ಹಾಡಿನಲ್ಲೇ ಮೋಡಿ ಮಾಡುತ್ತಿದ್ದಾನೆ ‘chef ಚಿದಂಬರ’ : ಟೈಟಲ್ ಟ್ರ್ಯಾಕ್ಗೆ ಅಭಿಮಾನಿಗಳು ಫಿದಾ..!