ಮಾಲೆ : ಮಾಲ್ಡೀವ್ಸ್ ಮತ್ತು ಭಾರತದ ಮಧ್ಯೆದೊಂದಿಗಿನ ವಿವಾದ ಬಳಿಕ ಮಹತ್ವದ ಬೆಳವಣಿಗೆ ನಡೆದಿದೆ. ಮಾಲ್ಡೀವ್ಸ್ನಿಂದ ಭಾರತೀಯ ಸೈನಿಕರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಭಾರತ ಸರ್ಕಾರಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಸೂಚನೆ ನೀಡಿದ್ದಾರೆ.
ಮಾರ್ಚ್ 15 ರ ಮುಂಚೆಗೆ ಭಾರತೀಯ ಸೇನೆಯನ್ನು ದ್ವೀಪ ರಾಷ್ಟ್ರದಿಂದ ಹಿಂತೆಗೆದುಕೊಳ್ಳಬೇಕು ಎಂದು ಮಾಲ್ಡೀವ್ಸ್ ಅಧ್ಯಕ್ಷರು ಹೇಳಿದ್ದಾರೆ. ಮಾಲ್ಡೀವ್ಸ್ನಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿಗಳು ಮತ್ತು ಮಾಲೆಯಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳ ನಡುವಿನ ಸಭೆಯ ನಂತರ ಈ ಹೇಳಿಕೆ ಬಂದಿದೆ.
ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿಯ ನೀತಿ ನಿರ್ದೇಶಕ ಅಬ್ದುಲ್ಲಾ ನಜೀಮ್ ಮಾತನಾಡಿ, ಮಾರ್ಚ್ 15 ರ ಒಳಗೆ ಭಾರತೀಯ ಸೈನಿಕರನ್ನು ತೆಗೆದುಹಾಕುವ ಪ್ರಸ್ತಾಪವನ್ನು ಮಾಲ್ಡೀವ್ಸ್ ಅಧ್ಯಕ್ಷರು ಮಾಡಿದ್ದಾರೆ. ಆದರೆ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವರದಿಯಾದ ಸಭೆಯ ಬಗ್ಗೆ ಇದುವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಟಿಕೆಟ್ ವಿಚಾರಕ್ಕೆ ಜಗಳ : ಬಿಎಂಟಿಸಿ ಕಂಡಕ್ಟರ್ ಮೇಲೆ ಹ*ಲ್ಲೆ ಮಾಡಿದ ಮಹಿಳೆ..!