ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟ ಮಾದಪ್ಪನ ಹುಂಡಿಯಲ್ಲಿ 2 ಕೋಟಿ ಹಣ ಹಾಗೂ 30 ಗ್ರಾಂ ಚಿನ್ನ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯ್ತು. 2 ಕೋಟಿ ಹಣ, 30 ಗ್ರಾಂ ಚಿನ್ನ ಹಾಗೂ 1 ಕೆಜಿ 865 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಾನಿದ್ಯದಲ್ಲಿ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ದೇವರ ಹುಂಡಿಗಳನ್ನು ತೆರೆಯಲಾಯಿತು. ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.
ಮಹಾನವಮಿ, ಆಯುಧ ಪೂಜೆ ವಿಜಯದಶಮಿ, ದಸರಾ ರಜಾ ದಿನಗಳು, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆಗ ಹರಕೆಯ ರೂಪದಲ್ಲಿ 2,00,80,844 ನಗದು 30 ಗ್ರಾಂ ಚಿನ್ನ ಹಾಗೂ 1,865 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇದನ್ನೂ ಓದಿ : ಬಿಎಂಟಿಸಿ ಬಸ್ನಲ್ಲಿ ಕುಳಿತ್ತಿದ್ದ ಕಂಡಕ್ಟರ್ ತಲೆಗೆ ಕಲ್ಲಿಂದ ಹೊಡೆದ ಪ್ರಯಾಣಿಕ..!