ಹುಬ್ಬಳ್ಳಿ : ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ತಾರಿಹಾಳ ಗ್ರಾಮದಲ್ಲಿ ನಡೆದಿದೆ. ಅರುಣ ಚುರಮುರಿ 17 ವರ್ಷದ ಮೃತ ಯುವಕ.
ಅರುಣ ಚುರಮುರಿ ತಾರಿಹಾಳದ ಜೋಡಳ್ಳಿ ರಸ್ತೆಯಲ್ಲಿ ಜಾನುವಾರು ಮೇಯಿಸಲು ಹೋದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಮಳೆ ಬರ್ತಿದ್ರಿಂದ ಯುವಕ ಮರದ ಕೆಳಗೆ ನಿಂತಿದ್ದ. ಈ ವೇಳೆ ಏಕಾಏಕಿ ಸಿಡಿಲು ಬಡಿದು ಅಲ್ಲೆ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಪೊಲೀಸರು, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಮಡಿಕೇರಿ : ಮಗಳ ಪ್ರಿಯಕರನ ಮೇಲೆ ಬಿಸಿ ನೀರು ಎರಚಿ ವಿಕೃತಿ ಮೆರೆದ ತಂದೆ..!
Post Views: 80