Download Our App

Follow us

Home » ಅಪರಾಧ » ವಿಜಯಪುರ : ಧ್ವಜಾರೋಹಣದ ವೇಳೆ ಗುಂಡು ಹಾರಿಸಿದ ವ್ಯಕ್ತಿ – ಗ್ರಾಪಂ ಅಧ್ಯಕ್ಷೆಗೆ ಗಾಯ..!

ವಿಜಯಪುರ : ಧ್ವಜಾರೋಹಣದ ವೇಳೆ ಗುಂಡು ಹಾರಿಸಿದ ವ್ಯಕ್ತಿ – ಗ್ರಾಪಂ ಅಧ್ಯಕ್ಷೆಗೆ ಗಾಯ..!

ವಿಜಯಪುರ : ಗಣರಾಜ್ಯೋತ್ಸವ ಧ್ವಜಾರೋಹಣ ವೇಳೆ ವ್ಯಕ್ತಿಯೋರ್ವ ಶೋ ಅಪ್​​ಗಾಗಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ. ಹಾರಿಸಿದ ಗುಂಡು ಗ್ರಾಮ ಪಂಚಾಯ್ತಿ ಅಧ್ಯಕ್ಷೆಗೆ ತಗುಲಿದೆ. ಅದೇ ಗ್ರಾಮದ ಮಲ್ಲು ಗಿನ್ನಿಎಂಬಾತ ಗುಂಡು ಹಾರಿಸಿದ ವ್ಯಕ್ತಿಯಾಗಿದ್ದಾನೆ.

ಗ್ರಾಮ ಪಂಚಾಯತಿಯಲ್ಲಿ ಧ್ವಜಾರೋಹಣ ನಡೆಯುತ್ತಿದ್ದ ಸಂದರ್ಭದಲ್ಲಿ ಪಂಚಾಯತಿ ಎದುರಿಗೆ ಮಲ್ಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವೇಳೆ ಗುಂಡು ಗ್ರಾಮ ಪಂಚಾಯತ ಅಧ್ಯಕ್ಷೆ ಸೋಮವ್ವ ಅವರ ತೊಡೆಗೆ ತಾಗಿದೆ.

ಇನ್ನು ಮಿಸ್ ಫೈರ್ ನಿಂದ ಗ್ರಾಮ ಪಂಚಾಯತ ಅಧ್ಯಕ್ಷೆಗೆ ಗುಂಡು ತಾಗಿದೆ ಎನ್ನಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸರು ಯತ್ನ ನಡೆಸಿದ್ದು ಆತ ಪರಾರಿಯಾಗಿದ್ದಾನೆ. ಗಣರಾಜ್ಯೋತ್ಸವ ವೇಳೆ ಗುಂಡು ಹಾರಿಸಲು ಅವಕಾಶವಿಲ್ಲ. ಇದನ್ನು ಮಾಡಿದ್ದೂ ಅಲ್ಲದೇ ಗ್ರಾಮಪಂಚಾಯತಿ ಅಧ್ಯಕ್ಷೆಗೂ ಗಾಯವಾಗಿದೆ.

ಈ ಕುರಿತು ವಿಚಾರಣೆ ನಡೆಸಿದ್ದು. ಆತ ಯಾವ ಉದ್ದೇಶಕ್ಕೆ ಹೀಗೆ ಮಾಡಿದ್ದಾನೆ ಎನ್ನುವ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ. ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಬಿಗ್​ಬಾಸ್ ಮನೆಮಂದಿಯೆಲ್ಲ ತುಕಾಲಿ ಮಹಾರಾಜರಿಗೆ ಸೇವಕರು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here