Download Our App

Follow us

Home » ಅಪರಾಧ » ಸಕ್ಕರೆನಾಡಲ್ಲಿ ನಿಲ್ಲದ ಹೆಣ್ಣು ಭ್ರೂಣ ಹ*ತ್ಯೆ : ಹೆಲ್ತ್‌ ಕ್ವಾಟರ್ಸ್‌ನಲ್ಲೇ ದುಷ್ಕೃತ್ಯ ಬೆಳಕಿಗೆ..!

ಸಕ್ಕರೆನಾಡಲ್ಲಿ ನಿಲ್ಲದ ಹೆಣ್ಣು ಭ್ರೂಣ ಹ*ತ್ಯೆ : ಹೆಲ್ತ್‌ ಕ್ವಾಟರ್ಸ್‌ನಲ್ಲೇ ದುಷ್ಕೃತ್ಯ ಬೆಳಕಿಗೆ..!

ಮಂಡ್ಯ : ಜಿಲ್ಲೆಯಲ್ಲಿ ಎಷ್ಟೇ ಕಟ್ಟುನಿಟ್ಟಿನ ಕ್ರಮಗಳು ಮತ್ತು ಜಾಗೃತಿ ವಹಿಸಿದರೂ ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣಗಳು ನಿಲ್ಲುತ್ತಿಲ್ಲ. ಇದೀಗ ಸಕ್ಕರೆನಾಡಲ್ಲಿ ಮತ್ತೊಂದು ಭ್ರೂಣ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮಂಡ್ಯದ ಪಾಂಡವಪುರದ ಹೆಲ್ತ್ ಕ್ವಾಟ್ರಸ್​ನಲ್ಲಿ ಆಸ್ಪತ್ರೆ ಹೊರಗುತ್ತಿಗೆ ನೌಕರರಾಗಿರುವ ಆನಂದ್, ಅಶ್ವಿನಿ ದಂಪತಿಗಳು ಮೈಸೂರು ಮೂಲದ ಮಹಿಳೆಗೆ ಭ್ರೂಣ ಹತ್ಯೆ ಮಾಡಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಹೆಲ್ತ್ ಕ್ವಾಟ್ರಸ್​ ಮೇಲೆ ಮಂಡ್ಯ DHO ಮೋಹನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಭ್ರೂಣ ಹತ್ಯೆಗೆ ಔಷಧಿ ನೀಡಿದ್ದರು ಎನ್ನಲಾದ ಆನಂದ್ ಮತ್ತು ಅಶ್ವಿನಿಯನ್ನು ಪೊಲೀಸ್​ ವಶಕ್ಕೆ ಪಡೆದಿದ್ದಾರೆ.

ಈಗಾಗಲೇ 2 ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮೈಸೂರಿನ ಮಹಿಳೆ, 3ನೇ ಮಗು ಹೆಣ್ಣು ಎಂದು ತಿಳಿದು ಅಬಾರ್ಷನ್​ ಮಾಡಿಸಿಕೊಳ್ಳಲು ಮುಂದಾಗಿದ್ದಾಳೆ. ನಿನ್ನೆ ತಡರಾತ್ರಿ ಹೆಲ್ತ್ ಕ್ವಾಟ್ರಸ್ ಮನೆಯಲ್ಲಿ ಅಬಾರ್ಷನ್​ಗೆ ತಯಾರಿ ನಡೆಸುತ್ತಿದ್ದರು. ಅಧಿಕಾರಿಗಳು ದಾಳಿ ಮಾಡುವ ವೇಳೆಗೆ ಗರ್ಭಿಣಿ ಗರ್ಭಪಾತದ ಔಷಧಿ ಸೇವಿಸಿದ್ದರು. ಅದರೆ ರೆಡ್ ಹ್ಯಾಂಡಾಗಿ ಆರೋಪಿಗಳನ್ನು ಹಿಡಿದ್ರೂ ಮಗುವಿನ ಜೀವ ಉಳಿಸಲು ಆಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ರಾಜ್ಯದಲ್ಲಿ 2ನೇ ಹಂತದ ವೋಟಿಂಗ್ : ಬೆಂಗಳೂರು-ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here