ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು ಕೇಳಿದ್ದು, ರೌಡಿಶೀಟರ್ ಕಾಲಿಗೆ ಇನ್ಸ್ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿರುವ ಘಟನೆ ಚಿಕ್ಕಮುಲಗೂಡು ಗ್ರಾಮದ ಬಳಿ ನಡೆದಿದೆ. ಮುತ್ತುರಾಜು ಅಲಿಯಾಸ್ ಡಕ್ಕ ಎಂಬಾತ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಕೊಲೆ ಕೇಸ್ ಸಂಬಂಧ ಮುತ್ತುರಾಜು ಅಲಿಯಾಸ್ ಡಕ್ಕ ಎಂಬಾತನ್ನು ಪೊಲೀಸರು ಅರೆಸ್ಟ್ ಮಾಡಲು ಹೋಗಿದ್ದರು. ಈ ವೇಳೆ ರೌಡಿಶೀಟರ್ ಡಕ್ಕ ಪೊಲೀಸ್ ಪೇದೆ ಸಿದ್ದರಾಜು ಎಂಬಾತನ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ.
ಹೀಗಾಗಿ ಆರೋಪಿ ಕಾಲಿಗೆ ಇನ್ಸ್ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿದ್ದಾರೆ. ಈತ ಹಲವು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದನು. ಆದರೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಫೈರಿಂಗ್ ವೇಳೆ ಗಾಯಗೊಂಡ ಆರೋಪಿನ್ನು ಪೊಲೀಸರು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಗಾಯಗೊಂಡ ಪೊಲೀಸ್ ಪೇದೆಗೆ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ವಿನಯ್ ರಾಜ್ಕುಮಾರ್ ‘ಪೆಪೆ’ ಸಿನಿಮಾ ವಿತರಣೆ ಮಾಡಲಿದೆ ಕೆಆರ್ಜಿ ಸ್ಟುಡಿಯೋಸ್..!