ಮಂಗಳೂರು : ನಗರದಲ್ಲಿ ನಿನ್ನೆ ನಸುಕಿನ ಜಾವ ದರೋಡೆ ನಡೆಸಿ ಪರಾರಿಯಾಗಿದ್ದ ಮಧ್ಯಪ್ರದೇಶ ಮೂಲದ ಖತರ್ನಾಕ್ ಚಡ್ಡಿ ಗ್ಯಾಂಗ್ನ್ನು ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿದ್ದರು. ಇನ್ನು ಈ ಗ್ಯಾಂಗ್ ರಾತ್ರಿ ವೇಳೆ ಪರಾರಿಯಾಗಲು ಯತ್ನಿಸಿದಾಗ, ಆರೋಪಿಗಳ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ.
ಮುಲ್ಕಿ ಬಳಿ ಕಾರು ಬಿಟ್ಟು ಹೋಗಿದ್ದ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸುತ್ತಿದ್ದಾಗ ವೇಳೆ ಎಎಸ್ಐ ಒಬ್ಬರ ಮೇಲೆ ಹಲ್ಲೆ ನಡೆಸಿ ಚಡ್ಡಿ ಗ್ಯಾಂಗ್ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದೆ. ಈ ಸಂದರ್ಭ ಪೊಲೀಸರು ಕಾಲಿಗೆ ಗುಂಡೇಟು ಹಾರಿಸಿದ್ದಾರೆ.
ಇಬ್ಬರ ಕಾಲಿಗೆ ಗುಂಡೇಟು ಬಿದ್ದಿದ್ದು ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ. ಶೂಟೌಟ್ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯ ಹಿನ್ನೆಲೆ : ಮಂಗಳವಾರ (ಜು.9)ರಂದು ಮುಂಜಾನೆ ಮಂಗಳೂರು ನಗರದ ಉರ್ವಾ ಬಳಿಯ ಕೋಟೆಕಣಿಯಲ್ಲಿ ವೃದ್ಧ ದಂಪತಿಗೆ ಹಲ್ಲೆಗೈದು ದರೋಡೆ ನಡೆಸಿ ಚಡ್ಡಿ ಗ್ಯಾಂಗ್ ಪರಾರಿಯಾಗಿತ್ತು. ಈ ಎಲ್ಲ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬಳಿಕ ಪೊಲೀಸರು ಚಡ್ಡಿ ಗ್ಯಾಂಗ್ ಅರೆಸ್ಟ್ಗಾಗಿ ತನಿಖೆ ಶುರು ಮಾಡಿ ನಾಲ್ವರು ಕಳ್ಳರನ್ನು ಬೆಂಗಳೂರು ಬಸ್ಸಿನಲ್ಲಿ ತೆರಳುತ್ತಿದ್ದಾಗಲೇ ಮಿಂಚಿನ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಸಕಲೇಶಪುರದಲ್ಲಿ ಬಂಧಿಸಿದ್ದರು.
ಇದನ್ನೂ ಓದಿ : ಬಸ್ ಮತ್ತು ಹಾಲಿನ ಟ್ಯಾಂಕರ್ ನಡುವೆ ಡೆಡ್ಲಿ ಆಕ್ಸಿಡೆಂಟ್ : 18 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ..!