Download Our App

Follow us

Home » ಅಪರಾಧ » ಮಂಗಳೂರು : ಸ್ಥಳ ಮಹಜರ್​​ ನಡೆಸುತ್ತಿದ್ದಾಗ ಪರಾರಿಯಾಗಲು ಯತ್ನ – ಖತರ್ನಾಕ್ ಚಡ್ಡಿಗ್ಯಾಂಗ್ ಮೇಲೆ ಶೂಟೌಟ್..!

ಮಂಗಳೂರು : ಸ್ಥಳ ಮಹಜರ್​​ ನಡೆಸುತ್ತಿದ್ದಾಗ ಪರಾರಿಯಾಗಲು ಯತ್ನ – ಖತರ್ನಾಕ್ ಚಡ್ಡಿಗ್ಯಾಂಗ್ ಮೇಲೆ ಶೂಟೌಟ್..!

ಮಂಗಳೂರು : ನಗರದಲ್ಲಿ ನಿನ್ನೆ ನಸುಕಿನ ಜಾವ ದರೋಡೆ ನಡೆಸಿ ಪರಾರಿಯಾಗಿದ್ದ ಮಧ್ಯಪ್ರದೇಶ ಮೂಲದ ಖತರ್ನಾಕ್ ಚಡ್ಡಿ ಗ್ಯಾಂಗ್​ನ್ನು ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿದ್ದರು. ಇನ್ನು ಈ ಗ್ಯಾಂಗ್​ ರಾತ್ರಿ ವೇಳೆ ಪರಾರಿಯಾಗಲು ಯತ್ನಿಸಿದಾಗ, ಆರೋಪಿಗಳ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ.

ಮುಲ್ಕಿ ಬಳಿ ಕಾರು ಬಿಟ್ಟು ಹೋಗಿದ್ದ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸುತ್ತಿದ್ದಾಗ ವೇಳೆ ಎಎಸ್​ಐ ಒಬ್ಬರ ಮೇಲೆ ಹಲ್ಲೆ ನಡೆಸಿ ಚಡ್ಡಿ ಗ್ಯಾಂಗ್​ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದೆ. ಈ ಸಂದರ್ಭ ಪೊಲೀಸರು ಕಾಲಿಗೆ ಗುಂಡೇಟು ಹಾರಿಸಿದ್ದಾರೆ.

ಇಬ್ಬರ ಕಾಲಿಗೆ ಗುಂಡೇಟು ಬಿದ್ದಿದ್ದು ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ. ಶೂಟೌಟ್ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ  ಹಿನ್ನೆಲೆ : ಮಂಗಳವಾರ (ಜು.9)ರಂದು ಮುಂಜಾನೆ ಮಂಗಳೂರು ನಗರದ ಉರ್ವಾ ಬಳಿಯ ಕೋಟೆಕಣಿಯಲ್ಲಿ ವೃದ್ಧ ದಂಪತಿಗೆ ಹಲ್ಲೆಗೈದು ದರೋಡೆ ನಡೆಸಿ ಚಡ್ಡಿ ಗ್ಯಾಂಗ್ ಪರಾರಿಯಾಗಿತ್ತು. ಈ ಎಲ್ಲ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬಳಿಕ ಪೊಲೀಸರು ಚಡ್ಡಿ ಗ್ಯಾಂಗ್ ಅರೆಸ್ಟ್​ಗಾಗಿ ತನಿಖೆ ಶುರು ಮಾಡಿ ನಾಲ್ವರು ಕಳ್ಳರನ್ನು ಬೆಂಗಳೂರು ಬಸ್ಸಿನಲ್ಲಿ ತೆರಳುತ್ತಿದ್ದಾಗಲೇ ಮಿಂಚಿನ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಸಕಲೇಶಪುರದಲ್ಲಿ ಬಂಧಿಸಿದ್ದರು.

ಇದನ್ನೂ ಓದಿ : ಬಸ್​ ಮತ್ತು ಹಾಲಿನ ಟ್ಯಾಂಕರ್​ ನಡುವೆ ಡೆಡ್ಲಿ ಆಕ್ಸಿಡೆಂಟ್ : 18 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here