Download Our App

Follow us

Home » ಮೆಟ್ರೋ » BBMP ಕೇಂದ್ರ ಕಚೇರಿಯಲ್ಲಿ ಮತ್ತೊಂದು ಅಗ್ನಿ ಅವಘಡ – ತಪ್ಪಿದ ಭಾರೀ ಅನಾಹುತ..!

BBMP ಕೇಂದ್ರ ಕಚೇರಿಯಲ್ಲಿ ಮತ್ತೊಂದು ಅಗ್ನಿ ಅವಘಡ – ತಪ್ಪಿದ ಭಾರೀ ಅನಾಹುತ..!

ಬೆಂಗಳೂರು : ಗ್ಯಾಸ್ ಲೀಕ್ ಆಗಿ ಸಿಲಿಂಡರ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ BBMP ಕೇಂದ್ರ ಕಚೇರಿಯ ಆದಿಶಕ್ತಿ ದೇವಾಲಯದ ಬಳಿ ನಡೆದಿದೆ. ಎಚ್ಚರ ತಪ್ಪಿದ್ರೆ ಪಾಲಿಕೆಯಲ್ಲಿ ದೊಡ್ಡ ಅನಾಹುತವೇ ನಡೆಯುತ್ತಿತ್ತು.

ಇಂದು ನಾಗರಪಂಚಮಿ ಹಿನ್ನೆಲೆ ದೇಶದ ಹಲವು ಭಾಗಗಳಲ್ಲಿ ಅತ್ಯಂತ ಶ್ರದ್ಧಾಭಕ್ತಿಯಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ. ಅದೇ ರೀತಿ ಆದಿಶಕ್ತಿ ದೇವಾಲಯದಲ್ಲೂ ಪೂಜೆ ನಡೆಯುತ್ತಿತ್ತು. ಈ ವೇಳೆ ದೇಗುಲದಲ್ಲಿ ವಿಶೇಷ ಪ್ರಸಾದ ತಯಾರಿಸುವಾಗ ಸಿಲಿಂಡರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇನ್ನು ಸಿಲಿಂಡರ್​​ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ, ಸಿಲಿಂಡರ್​​ಗೆ ಗೋಣಿ ಚೀಲದಿಂದ ಮುಚ್ಚಿ ಬೆಂಕಿ ನಂದಿಸಿದ್ದಾರೆ. ಇನ್ನು ನಾಗರಪಂಚಮಿ ಪೂಜೆಗಾಗಿ ನೂರಾರು ಮಂದಿ ಬಂದಿದ್ದರು. ಆದರೆ ಅಡುಗೆ ಭಟ್ಟರ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ. ಕೊಂಚ ಯಾಮಾರಿದ್ದರೂ ದೊಡ್ಡ ಅನಾಹುತ ಆಗ್ತಿತ್ತು.

ಇದನ್ನೂ ಓದಿ : ಮಡನೂರ್ ಮನು ನಟನೆಯ ‘ಕೇದಾರ್ ನಾಥ್ ಕುರಿಫಾರಂ’ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್​​..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here