ಹೈದರಾಬಾದ್ : ತೆಲುಗಿನ ಖ್ಯಾತ ನಟ ಮೆಗಾ ಸ್ಟಾರ್ ಚಿರಂಜೀವಿ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ.
ರಾಜ್ಯದಲ್ಲಿ ಪ್ರಬಲವಾಗಿರುವ ಕಾಪು ಸಮುದಾಯಕ್ಕೆ ಸೇರಿದ ಚಿರಂಜೀವಿ ಎನ್.ಡಿ.ಎ. ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿರುವುದು ದೊಡ್ಡ ಬಲ ಸಿಕ್ಕಂತಾಗಿದೆ. ಚಿರಂಜೀವಿ ಇನ್ನು ನಮ್ಮ ಪಕ್ಷದಲ್ಲೇ ಇದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ ಬೆನ್ನಲ್ಲೇ ಚಿರಂಜೀವಿ ಅವರಿಂದ ಎನ್.ಡಿ.ಎ. ಮೈತ್ರಿಕೂಟಕ್ಕೆ ಬೆಂಬಲದ ಘೋಷಣೆ ಹೊರಬಿದ್ದಿದೆ.
ರಾಜಕೀಯದಿಂದ ಅನೇಕ ವರ್ಷ ದೂರವಾಗಿದ್ದ ನಂತರ ಮತ್ತೆ ರಾಜ್ಯದಲ್ಲಿ ಜನಸೇನಾ, ಟಿಡಿಪಿ ಮತ್ತು ಬಿಜೆಪಿ ಮೈತ್ರಿ ಬಳಿಕ ನಾನು ರಾಜಕಾರಣದ ಬಗ್ಗೆ ಚರ್ಚಿಸುತ್ತಿದ್ದೇನೆ. ಆಂಧ್ರಪ್ರದೇಶದ ಅಭಿವೃದ್ಧಿಗೆ ಎನ್.ಡಿ.ಎ. ಅಭ್ಯರ್ಥಿಗಳಿಗೆ ಅದರಲ್ಲಿಯೂ ವಿಶೇಷವಾಗಿ ನನ್ನ ಆಪ್ತರಾದ ಬಿಜೆಪಿ ಅಭ್ಯರ್ಥಿ ಸಿ.ಎಂ. ರಮೇಶ್ ಮತ್ತು ಜನಸೇನಾ ಅಭ್ಯರ್ಥಿ ಪಿ. ರಮೇಶ್ ಬಾಬು ಅವರಿಗೆ ಮತ ಹಾಕಿ ಎಂದು ಮನವಿ ಮಾಡಿದ್ದಾರೆ. ಚಿರು NDA ಬೆಂಬಲದಿಂದ ಆಂಧ್ರ, ಕರ್ನಾಟಕ ಸೇರಿ ಹಲವೆಡೆ ಎಫೆಕ್ಟ್ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಬೆಂಗಳೂರು ಹೊರ ವಲಯದಲ್ಲಿ ಭೀಕರ ಅಪಘಾತ – ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು..!