Download Our App

Follow us

Home » ಅಪರಾಧ » ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆ : ಸೈಕಲ್ ರವಿ ಸಹಚರರು ಅರೆಸ್ಟ್..!

ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆ : ಸೈಕಲ್ ರವಿ ಸಹಚರರು ಅರೆಸ್ಟ್..!

ಬೆಂಗಳೂರು : ಮೀಟರ್ ಬಡ್ಡಿ ದಂಧೆಯಲ್ಲಿ ಸಾಲ ವಸೂಲಿಗೆ ಮುಂದಾಗಿದ್ದ ಸೈಕಲ್ ರವಿ ಸಹಚರರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಗೆ ಮಂಜುನಾಥ್ ಎಂಬಾತ ಸಾಲ ನೀಡಿದ್ದ, ಅದನ್ನ ವಸೂಲಿ ಮಾಡಿಕೊಡಲು ಸೈಕಲ್ ರವಿ ಸಹಚರನಾದ ಉಮೇಶ್​ಗೆ ಹೇಳಿದ್ದ. ಹಾಗಾಗಿ ಉಮೇಶ್ ತನ್ನ ಸಹಚರನಾದ ಸುರೇಶ್ ಜೊತೆ ಮೀಟರ್ ಬಡ್ಡಿ ವಸೂಲಿಗೆ ಮುಂದಾಗಿದ್ದ.

ಈ ವೇಳೆ ಉಮೇಶ್, ಸುರೇಶ್ ಹಾಗೂ ಮಂಜುನಾಥ್​​ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಟ್ರಾವೆಲ್ಸ್ ವ್ಯವಹಾರಕ್ಕಾಗಿ ರಂಗನಾಥ್ 23 ಲಕ್ಷ ಹಣವನ್ನ ಮಂಜುನಾಥ್​​ಯಿಂದ ಬಡ್ಡಿಗೆ ಸಾಲ ಪಡೆದಿದ್ದ. ರಂಗನಾಥ್ 23 ಲಕ್ಷ ಹಣವನ್ನ ಬಡ್ಡಿ ಸಮೇತ ಹಿಂದಿರುಗಿಸಿದ್ದ. ಆದರೆ ಮಂಜುನಾಥ್ ನಾನು ಮೀಟರ್ ಬಡ್ಡಿಗೆ ಹಣವನ್ನ ಕೊಟ್ಟಿರೋದು, ಇನ್ನೂ 5 ಲಕ್ಷ ಹಣವನ್ನ ನೀನು ಕೊಡಬೇಕು ಎಂದು ಪಟ್ಟು ಹಿಡಿದಿದ್ದ.

5 ಲಕ್ಷ ಹಣವನ್ನ ರಂಗನಾಥ್ ಕೊಡಲು ನಿರಾಕರಿಸಿದಾಗ ರೌಡಿಶೀಟರ್ ಉಮೇಶ್​​ಗೆ ಹೇಳಿದ್ದಾನೆ. ಉಮೇಶ್ ಹಾಗೂ ಸುರೇಶ್ ರಂಗನಾಥ್​​ಗೆ ಹಣ ಕೊಡುವಂತೆ ಜೀವ ಬೆದರಿಕೆ ಹಾಕಿದ್ದು, ಈ ವೇಳೆ ಆರೋಪಿಗಳನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರ್ ಆರ್ ನಗರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬಾಗಲಕೋಟೆಯಲ್ಲಿ ಗ್ರಾ.ಪಂ ಸದಸ್ಯ ಹಾಗೂ ಕುಟುಂಬದವರ ಮೇಲೆ ಹ*ಲ್ಲೆ ಮಾಡಿದ ಅಧ್ಯಕ್ಷೆ ಪುತ್ರ..!

Leave a Comment

DG Ad

RELATED LATEST NEWS

Top Headlines

ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?

ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ. ನಿರ್ಮಾಪಕರಿಂದ 2.5 ಕೋಟಿ ರೂಪಾಯಿ ಪಡೆದು ಡಿಜಿಟಲ್ ಟೆರೆನ್ ಸಂಸ್ಥೆ ಗ್ರಾಫಿಕ್ಸ್

Live Cricket

Add Your Heading Text Here