ಬೆಂಗಳೂರು : ಮೀಟರ್ ಬಡ್ಡಿ ದಂಧೆಯಲ್ಲಿ ಸಾಲ ವಸೂಲಿಗೆ ಮುಂದಾಗಿದ್ದ ಸೈಕಲ್ ರವಿ ಸಹಚರರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಗೆ ಮಂಜುನಾಥ್ ಎಂಬಾತ ಸಾಲ ನೀಡಿದ್ದ, ಅದನ್ನ ವಸೂಲಿ ಮಾಡಿಕೊಡಲು ಸೈಕಲ್ ರವಿ ಸಹಚರನಾದ ಉಮೇಶ್ಗೆ ಹೇಳಿದ್ದ. ಹಾಗಾಗಿ ಉಮೇಶ್ ತನ್ನ ಸಹಚರನಾದ ಸುರೇಶ್ ಜೊತೆ ಮೀಟರ್ ಬಡ್ಡಿ ವಸೂಲಿಗೆ ಮುಂದಾಗಿದ್ದ.
ಈ ವೇಳೆ ಉಮೇಶ್, ಸುರೇಶ್ ಹಾಗೂ ಮಂಜುನಾಥ್ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಟ್ರಾವೆಲ್ಸ್ ವ್ಯವಹಾರಕ್ಕಾಗಿ ರಂಗನಾಥ್ 23 ಲಕ್ಷ ಹಣವನ್ನ ಮಂಜುನಾಥ್ಯಿಂದ ಬಡ್ಡಿಗೆ ಸಾಲ ಪಡೆದಿದ್ದ. ರಂಗನಾಥ್ 23 ಲಕ್ಷ ಹಣವನ್ನ ಬಡ್ಡಿ ಸಮೇತ ಹಿಂದಿರುಗಿಸಿದ್ದ. ಆದರೆ ಮಂಜುನಾಥ್ ನಾನು ಮೀಟರ್ ಬಡ್ಡಿಗೆ ಹಣವನ್ನ ಕೊಟ್ಟಿರೋದು, ಇನ್ನೂ 5 ಲಕ್ಷ ಹಣವನ್ನ ನೀನು ಕೊಡಬೇಕು ಎಂದು ಪಟ್ಟು ಹಿಡಿದಿದ್ದ.
5 ಲಕ್ಷ ಹಣವನ್ನ ರಂಗನಾಥ್ ಕೊಡಲು ನಿರಾಕರಿಸಿದಾಗ ರೌಡಿಶೀಟರ್ ಉಮೇಶ್ಗೆ ಹೇಳಿದ್ದಾನೆ. ಉಮೇಶ್ ಹಾಗೂ ಸುರೇಶ್ ರಂಗನಾಥ್ಗೆ ಹಣ ಕೊಡುವಂತೆ ಜೀವ ಬೆದರಿಕೆ ಹಾಕಿದ್ದು, ಈ ವೇಳೆ ಆರೋಪಿಗಳನ್ನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರ್ ಆರ್ ನಗರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಾಗಲಕೋಟೆಯಲ್ಲಿ ಗ್ರಾ.ಪಂ ಸದಸ್ಯ ಹಾಗೂ ಕುಟುಂಬದವರ ಮೇಲೆ ಹ*ಲ್ಲೆ ಮಾಡಿದ ಅಧ್ಯಕ್ಷೆ ಪುತ್ರ..!