ಚಿತ್ರದುರ್ಗ : ರೇಣುಕಾಸ್ವಾಮಿಯನ್ನು ಅಮಾನುಷವಾಗಿ ಕೊಲೆ ಮಾಡಿದ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 13 ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ಹತ್ಯೆ ಕೃತ್ಯದಲ್ಲಿ ನಟ ದರ್ಶನ್ ಗ್ಯಾಂಗ್ನ 17 ಮಂದಿ ಪಾಲ್ಗೊಂಡಿದ್ದು, ತಪ್ಪಿಸಿಕೊಂಡಿರುವ ಇನ್ನೂ ನಾಲ್ವರ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಈ ಪ್ರಕರಣ ಸಂಬಂಧ ಚಿತ್ರದುರ್ಗದಲ್ಲಿ ನಿನ್ನೆ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿತ್ತು, ಇದೀಗ ದರ್ಶನ್ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಚಿತ್ರದುರ್ಗ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿಗೆ ಬೆದರಿಕೆ ಕರೆ ಬಂದಿದೆ. ವೀರಶೈವ-ಲಿಂಗಾಯತ ಸಮಾಜ ಪ್ರತಿಭಟನೆ ಮಾಡಿತ್ತು.
ಮಾಜಿ ಶಾಸಕ ತಿಪ್ಪಾರೆಡ್ಡಿ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದರು. ಭಾಷಣದ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ಗಳಿಂದ ಬೆದರಿಕೆ ಕಾಲ್ ಬಂದಿದೆ. ನಟ ದರ್ಶನ್ ವಿರುದ್ಧ ಶಾಸಕ ತಿಪ್ಪಾರೆಡ್ಡಿ ಆಕ್ರೋಶ ಹೊರಹಾಕಿದ್ದರು. ಪ್ರತಿಭಟನೆ ಬಳಿಕ ಅನಾಮಿಕ ವ್ಯಕ್ತಿಯಿಂದ ಫೋನ್ ಕಾಲ್ ಬಂದಿದ್ದು, ತಿಪ್ಪಾರೆಡ್ಡಿ ಅವರು ರೇಣುಕಾಸ್ವಾಮಿ ಸಂಬಂಧಿಕರಿಗೆ ಬೆದರಿಕೆ ಕರೆ ಬಗ್ಗೆ ಹೇಳಿದ್ದಾರೆ. ಬೆದರಿಕೆ ಆಗೋ ಧ್ವನಿಗಳನ್ನು ಪತ್ತೆ ಹಚ್ಚಿ ತಕ್ಕ ಪಾಠ ಕಲಿಸಬೇಕು ಎಂದು ಕೊಲೆಯಾದ ರೇಣುಕಾಸ್ವಾಮಿ ಸಂಬಂಧಿಕರ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ – ಬೆಂಗಳೂರು ನಂತರ ಇಂದು ಚಿತ್ರದುರ್ಗದಲ್ಲಿ ಆರೋಪಿಗಳ ಸ್ಪಾಟ್ ಮಹಜರ್..!