Download Our App

Follow us

Home » ಜಿಲ್ಲೆ » ದರ್ಶನ್​​ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಮಾಜಿ ಶಾಸಕ ಜಿ.ಎಚ್ ತಿಪ್ಪಾರೆಡ್ಡಿಗೆ ಬೆದರಿಕೆ ಕರೆ..!

ದರ್ಶನ್​​ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಮಾಜಿ ಶಾಸಕ ಜಿ.ಎಚ್ ತಿಪ್ಪಾರೆಡ್ಡಿಗೆ ಬೆದರಿಕೆ ಕರೆ..!

ಚಿತ್ರದುರ್ಗ : ರೇಣುಕಾಸ್ವಾಮಿಯನ್ನು ಅಮಾನುಷವಾಗಿ ಕೊಲೆ ಮಾಡಿದ ಕೇಸ್​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 13 ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ಹತ್ಯೆ ಕೃತ್ಯದಲ್ಲಿ ನಟ ದರ್ಶನ್‌ ಗ್ಯಾಂಗ್‌ನ 17 ಮಂದಿ ಪಾಲ್ಗೊಂಡಿದ್ದು, ತಪ್ಪಿಸಿಕೊಂಡಿರುವ ಇನ್ನೂ ನಾಲ್ವರ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಈ ಪ್ರಕರಣ ಸಂಬಂಧ ಚಿತ್ರದುರ್ಗದಲ್ಲಿ ನಿನ್ನೆ ದರ್ಶನ್​​ ವಿರುದ್ಧ ಬೃಹತ್​ ಪ್ರತಿಭಟನೆ ನಡೆದಿತ್ತು, ಇದೀಗ ದರ್ಶನ್​​ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಚಿತ್ರದುರ್ಗ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿಗೆ ಬೆದರಿಕೆ ಕರೆ ಬಂದಿದೆ. ವೀರಶೈವ-ಲಿಂಗಾಯತ ಸಮಾಜ ಪ್ರತಿಭಟನೆ ಮಾಡಿತ್ತು.

ಮಾಜಿ ಶಾಸಕ ತಿಪ್ಪಾರೆಡ್ಡಿ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದರು. ಭಾಷಣದ ಬೆನ್ನಲ್ಲೇ ದರ್ಶನ್​​ ಫ್ಯಾನ್ಸ್​ಗಳಿಂದ ಬೆದರಿಕೆ ಕಾಲ್​​ ಬಂದಿದೆ. ನಟ ದರ್ಶನ್ ವಿರುದ್ಧ ಶಾಸಕ ತಿಪ್ಪಾರೆಡ್ಡಿ ಆಕ್ರೋಶ ಹೊರಹಾಕಿದ್ದರು. ಪ್ರತಿಭಟನೆ ಬಳಿಕ ಅನಾಮಿಕ ವ್ಯಕ್ತಿಯಿಂದ ಫೋನ್ ಕಾಲ್ ಬಂದಿದ್ದು, ತಿಪ್ಪಾರೆಡ್ಡಿ ಅವರು ರೇಣುಕಾಸ್ವಾಮಿ ಸಂಬಂಧಿಕರಿಗೆ ಬೆದರಿಕೆ ಕರೆ ಬಗ್ಗೆ ಹೇಳಿದ್ದಾರೆ. ಬೆದರಿಕೆ ಆಗೋ ಧ್ವನಿಗಳನ್ನು ಪತ್ತೆ ಹಚ್ಚಿ ತಕ್ಕ ಪಾಠ ಕಲಿಸಬೇಕು ಎಂದು ಕೊಲೆಯಾದ ರೇಣುಕಾಸ್ವಾಮಿ ಸಂಬಂಧಿಕರ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ​ – ಬೆಂಗಳೂರು ನಂತರ ಇಂದು ಚಿತ್ರದುರ್ಗದಲ್ಲಿ ಆರೋಪಿಗಳ ಸ್ಪಾಟ್​ ಮಹಜರ್..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here