Download Our App

Follow us

Home » ರಾಜಕೀಯ » ಇಂದು ಸಿಎಂ ಸಿದ್ದು, ಡಿಸಿಎಂ ಡಿಕೆಶಿಯನ್ನ ಭೇಟಿಯಾಗಲಿರುವ ‘ಕೈ’ ಶಾಸಕರ ನಿಯೋಗ..!

ಇಂದು ಸಿಎಂ ಸಿದ್ದು, ಡಿಸಿಎಂ ಡಿಕೆಶಿಯನ್ನ ಭೇಟಿಯಾಗಲಿರುವ ‘ಕೈ’ ಶಾಸಕರ ನಿಯೋಗ..!

ಬೆಂಗಳೂರು : ಬೆಂಗಳೂರು ಕೈ ಶಾಸಕರಿಗೆ ಸಿಎಂ ಬುಲಾವ್ ನೀಡಿದ್ದು, ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರನ್ನು ಕಾಂಗ್ರೆಸ್​ ಶಾಸಕರ ನಿಯೋಗ ಭೇಟಿಯಾಗಲಿದೆ. ಲೋಕಸಭಾ ಚುನಾವಣೆ ಬಳಿಕ ಸಿಎಂ-ಡಿಸಿಎಂರನ್ನು ಮೊದಲ ಬಾರಿಗೆ ಶಾಸಕರು ಭೇಟಿಯಾಗ್ತಿದ್ದಾರೆ.

ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಶಾಸಕರ ನಿಯೋಗ ಭೇಟಿ ಮಾಡಲಿದ್ದು, ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್​​​, ಬೆಂಗಳೂರು ಗ್ರಾಮಾಂತರದ ಸೋಲಿನ ಬಗ್ಗೆ ಶಾಸಕರ ಜೊತೆ ಸಿಎಂ ಪರಾಮರ್ಶೆ ನಡೆಸಲಿದ್ದಾರೆ. ಹಿನ್ನಡೆ ಬಗ್ಗೆ ಪ್ರತಿಯೊಬ್ಬ ಶಾಸಕರು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಲಿದ್ದಾರೆ.

ಅಲ್ಲದೆ, ಇದೇ ಸಭೆಯಲ್ಲಿ ಬಿಬಿಎಂಪಿ ಎಲೆಕ್ಷನ್​​​​​​​ ಭವಿಷ್ಯ ನಿರ್ಧಾರವಾಗಲಿದೆ. ಬೇಗ ಎಲೆಕ್ಷನ್​​ ನಡೆಸಬೇಕೋ? ಸ್ವಲ್ಪ ದಿನ ಕಾಯಬೇಕೋ? ಎಂಬ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಅವರು  ಶಾಸಕರ ಅಭಿಪ್ರಾಯ ಕೇಳಲಿದ್ದಾರೆ. ಇನ್ನು, ಹೆಚ್ಚಿನ ಅನುದಾನ ಬಗ್ಗೆ ಸಿಎಂ ಹಾಗೂ ಡಿಸಿಎಂ ಬಳಿ ಶಾಸಕರು ಬೇಡಿಕೆ ಇಡುವ ಸಾಧ್ಯತೆಯಿದೆ.

ಇದನ್ನೂ ಓದಿ : ಕಾಶ್ಮೀರ : ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ – 10 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here