Download Our App

Follow us

Home » ರಾಜಕೀಯ » ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ : ಮೋದಿಯವರನ್ನು ಹಾಡಿಹೊಗಳಿದ ಜನಾರ್ದನ ರೆಡ್ಡಿ..!

ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ : ಮೋದಿಯವರನ್ನು ಹಾಡಿಹೊಗಳಿದ ಜನಾರ್ದನ ರೆಡ್ಡಿ..!

ಕೊಪ್ಪಳ : ಶ್ರೀರಾಮಮಂದಿರ ನಿರ್ಮಾಣದಲ್ಲಿ ಮೋದಿಜೀಯವರನ್ನು ಅಭಿನಂದಿಸಬೇಕು. ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ. 500 ವರ್ಷದ ಹೋರಾಟಕ್ಕೆ ಫಲ ಇದೀಗ ಬಂದಿದೆ ಎಂದು ನರೇಂದ್ರ ಮೋದಿಯವರನ್ನು ಶಾಸಕ ಜನಾರ್ದನ ರೆಡ್ಡಿಯವರು ಹಾಡಿ ಹೊಗಳಿದ್ದಾರೆ. ಈ ಮೂಲಕ ಬಿಜೆಪಿ ಸೇರ್ಪಡೆಯ ಸುಳಿವು ನೀಡಿದ್ರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ.

ಈ ಬಗ್ಗೆ ಕೊಪ್ಪಳದಲ್ಲಿ ಜನಾರ್ದನ ರೆಡ್ಡಿ ಮಾತನಾಡಿ, ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಹಿರಂಗವಾಗಿಯೇ ರೆಡ್ಡಿ ಮೋದಿಯನ್ನು ಹೊಗಳಿದ್ದಾರೆ.

ಇಕ್ಬಾಲ್ ಅನ್ಸಾರಿ ವಿರುದ್ಧ ಜನಾರ್ದನ ರೆಡ್ಡಿ ವಾಗ್ದಾಳಿ:

ಗಂಗಾವತಿಯ ಅಭಿವೃದ್ಧಿಯಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮೂಗು ತೂರಿಸುತ್ತಿದ್ದಾರೆ. ಸೋಲಿನ ಹತಾಶೆ ಇಕ್ಬಾಲ್ ಅನ್ಸಾರಿಯನ್ನು ಕಾಡುತ್ತಿದೆ. ಗಂಗಾವತಿ ಅಭಿವೃದ್ಧಿಗೆ ಸಹಕಾರ ಕೊಡುತ್ತಿಲ್ಲ. ಕ್ಲುಲ್ಲಕ ವಿಚಾರದಲ್ಲೂ ಅಭಿವೃದ್ಧಿಯಲ್ಲಿ ಅಡ್ಡಿ ಆಗುತ್ತಿದ್ದಾರೆ. ಎಂಪಿ ಚುನಾವಣೆ ಆದ ಮೇಲೆ ಕಾಂಗ್ರೆಸ್ ನವರು ಇಕ್ಬಾಲ್ ಅನ್ಸಾರಿಯನ್ನು ಡಸ್ಟ್ ಬಿನ್‍ಗೆ ಹಾಕುತ್ತಾರೆ ಎಂದು ಕಿಡಿಕಾರಿದ್ದಾರೆ.

ಅನ್ಸಾರಿ ರಾಜಕೀಯವಾಗಿ ಮೂಲೆ ಗುಂಪಾಗಿರುವ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದಾರೆ. ರಾಜಕೀಯದಲ್ಲಿ ಒಮ್ಮೆ ಸೋತು, ಒಮ್ಮೆ ಗೆದ್ದಿದ್ದರೆ ಅವರಿಗೆ ಹುಮ್ಮಸ್ಸು ಇರುತಿತ್ತು. ಆದರೆ, ಸತತ ಸೋಲಿನಿಂದ ಕಂಗೆಟ್ಟಿರುವ ಅನ್ಸಾರಿ ರಾಜಕೀಯ ಜೀವನ ಮುಗಿದಿದೆ. ಹೀಗಾಗಿ ಮಾನಸಿಕವಾಗಿ ಒತ್ತಡದಲ್ಲಿರುವ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಹಿರಿಯ ರಾಜಕಾರಣಿಯಾಗಿ ಅಭಿವೃದ್ಧಿ ವಿಚಾರದಲ್ಲಿ ನಗರದ ಬೆಳವಣಿಗೆ ವಿಚಾರದಲ್ಲಿ ಅನಗತ್ಯ ಹಸ್ತಕ್ಷೇಮ ಮಾಡುವ ಬದಲು ಸಹಕಾರ ನೀಡಬೇಕಿತ್ತು. ಕ್ಷುಲ್ಲಕ ವಿಚಾರದಲ್ಲಿ ಕೈ ಹಾಕ್ತಾರೆ ಎಂದರೆ ಯಾವ ಹಂತಕ್ಕೆ ಅವರು ಇಳಿದಿದ್ದಾರೆ ಎಂಬುದು ಗೊತ್ತಾಗುತ್ತದೆ. ಹೀಗಾಗಿ ಚುನಾವಣೆಯ ಬಳಿಕ ಸ್ವತಃ ಕಾಂಗ್ರೆಸ್ ಪಕ್ಷ ಅವರನ್ನು ನಿರ್ಲಕ್ಷಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ನೂರಾರು ಕೋಟಿ ಬಿಟ್ ಕಾಯಿನ್ ಹಗರಣ : ಅರೆಸ್ಟ್​ ಆಗೋ ಆತಂಕದಲ್ಲಿ ಮೂವರು ಇನ್ಸ್​ಪೆಕ್ಟರ್​​ಗಳು..!

Leave a Comment

DG Ad

RELATED LATEST NEWS

Top Headlines

ಕರ್ನಾಟಕ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟಿಸಿದ ರಾಗಿಣಿ ದ್ವಿವೇದಿ..!

ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ ಅವರು ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಜ್, ಗೌರವಾಧ್ಯಕ್ಷರಾದ ರವಿಶಂಕರ್,

Live Cricket

Add Your Heading Text Here