ಬೆಂಗಳೂರು : ತಾಯಿ, ಮಗನನ್ನು ಕಿಡ್ನ್ಯಾಪ್ ಮಾಡಿ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷ-ಪ್ರಾಮಾಣಿಕ ACP ಭರತ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ತಾಯಿ-ಮಗ ಕಿಡ್ನಾಪ್ ಆದ ಕೆಲವೇ ಕ್ಷಣಗಳಲ್ಲಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಜೋಸೆಫ್ (ರೌಡಿ ಶೀಟರ್), ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನಾ(ರೌಡಿ ಶೀಟರ್), ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಾಬುದ್ದೀನ್, ಸ್ವಾತಿ ಸೇರಿದಂತೆ 9 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಆಗಸ್ಟ್ 13ರಂದು ಯುವಕ ವರುಣ್ ಹಾಗೂ ಆತನ ತಾಯಿಯನ್ನು ಕಿಡ್ನ್ಯಾಪ್ ಮಾಡಿ ಮನೆಯಲ್ಲಿ ಅಕ್ರಮವಾಗಿ ಇರಿಸಿ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ವರುಣ್ಮತ್ತು ಆತನ ತಾಯಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ವಿಚಾರ ತಿಳಿದಿದ್ದ ಆರೋಪಿಗಳು ಕದ್ದ ಹಣದಲ್ಲಿ 2 ಲಕ್ಷ ರೂ. ನೀಡುವಂತೆ ತಾಯಿ, ಮಗನಿಗೆ ಬೆದರಿಕೆ ಹಾಕಿದ್ದಾರೆ. ಆದರೆ ಆರೋಪಿಗಳಿಗೆ ಯುವಕ ಮತ್ತು ಆತನ ತಾಯಿ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿಗಳು ತಾಯಿ, ಮಗನನ್ನು ಕಿಡ್ನಾಪ್ ಮಾಡಿ ಮನೆಯಲ್ಲಿ ಕೂಡಿಹಾಕಿ ಕಿರುಕುಳ ನೀಡಿದ್ದರು. ಬಳಿಕ ಇಬ್ಬರ ಬಳಿಯೂ ಹಣ ಇಲ್ಲ ಎಂದು ತಿಳಿದಾಗ ಅವರನ್ನು ಬಿಟ್ಟು ಕಳಿಸಿದ್ದರು.
ನಂತರ ನೊಂದ ಮಹಿಳೆ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಕೊಡ್ತಿದ್ದಂತೆ ACP ಭರತ್ ರೆಡ್ಡಿ ಚಾಣಾಕ್ಷತೆ ಪ್ರಯೋಗಿಸಿದ್ದರು. ಪ್ರಕರಣ ದಾಖಲಿಸಿಕೊಂಡ ACP ಭರತ್ ರೆಡ್ಡಿ ನೇತೃತ್ವದ ಟೀಂ ತನಿಖೆ ಪ್ರರಂಭಿಸಿ 9 ಜನ ಆರೋಪಿಗಳನ್ನು ಇದೀಗ ಬಂಧಿಸಿದ್ದಾರೆ. ಬಂಧಿತರ ಪೈಕಿ ಜೋಸೆಫ್ ಹಾಗೂ ಶ್ರೀನಿವಾಸ್ ರೌಡಿಶೀಟರ್ಗಳಾದರೆ, ಶಹಾಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ರಾಜ್ಯಪಾಲರ ವಿರುದ್ಧ ಸಿಡಿದೆದ್ದ ‘ಕೈ’ ಪಡೆ – ಪ್ರಾಸಿಕ್ಯೂಷನ್ ಖಂಡಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ..!