ಮುಂಬೈ : ಬಸ್ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರೋ ಘಟನೆ ಮುಂಬೈನ ಕುರ್ಲಾದಲ್ಲಿ ನಡೆದಿದೆ. ಟ್ರಾನ್ಸ್ಪೋರ್ಟ್ ಸಂಸ್ಥೆಯ ಬಸ್ ಹಾಗೂ ಎಲೆಕ್ಟ್ರಿಕ್ ಸಪ್ಲೈ ನಡುವೆ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಚಾಲಕ ಸಂಜಯ್ ಮೋರೆ 100 ಮೀಟರ್ ದೂರದಲ್ಲಿರೋ 30 ರಿಂದ 40 ವಾಹನಗಳು ಮತ್ತು ಪಾದಚಾರಿಗಳಿಗೆ ಡಿಕ್ಕಿ ಹೊಡೆದುಕೊಂಡು ಹೋಗಿದ್ದಾರೆ. ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, 42 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಲಕ ಸಂಜಯ್ ಮೋರೆಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಚಾಲಕನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ : ಮೋಕ್ಷಿತಾಗೆ ಹತ್ತಿರವಾಗೋಕೆ ಹೊರಟ್ರಾ ಗೌತಮಿ – ವರ್ಕೌಟ್ ಆಗುತ್ತಾ ಆಟದ ಲೆಕ್ಕ?
Post Views: 1,602