ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಕೇಸ್ನಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದೆ. ಆದರೆ ಇದೀಗ ಅತ್ಯಾಚಾರ ಕೇಸ್ನಲ್ಲಿ ಬಿಜೆಪಿ ಶಾಸಕ ಮುನಿರತ್ನರನ್ನು ಕಗ್ಗಲೀಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
DySP ದಿವಾಕರ್ ಶೆಟ್ಟಿ ಟೀಂ (ಪರಪ್ಪನ ಅಗ್ರಹಾರ) ಸೆಂಟ್ರಲ್ ಜೈಲ್ಗೆ ಎಂಟ್ರಿ ಕೊಟ್ಟು ಮುನಿರತ್ನರನ್ನು ಬಂಧಿಸಿದ್ದು, ಸದ್ಯ ಜೈಲ್ನಿಂದ ಅರೆಸ್ಟ್ ಮಾಡಿ ಠಾಣೆಗೆ ಕರೆದೊಯ್ದಿರುವ ಮಾಹಿತಿ ಲಭ್ಯವಾಗಿದೆ.
ಕಗ್ಗಲೀಪುರ ಠಾಣೆಗೆ ಕರೆದೊಯ್ದು ವಿಚಾರಣೆ ಮಾಡ್ತಿದ್ದು, ಎರಡು ಕೇಸ್ನಲ್ಲಿ ಈಗಾಗಲೇ ಬೇಲ್ ಪಡೆದಿರುವ ಮುನಿರತ್ನರನ್ನು, ರೇಪ್ ಕೇಸ್ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ಮಾಡಿದ ನಂತರ ವಿಶೇಷ ಕೋರ್ಟ್ ಮುಂದೆ ಪ್ರೊಡ್ಯೂಸ್ ಮಾಡಲಿದ್ದು, ಸಂಜೆ ವೇಳೆಗೆ ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರು ಪಡಿಸುವ ಸಾಧ್ಯತೆಯಿದೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ ಮಹಿಳೆ ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಇದೀಗ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಸಾಲು-ಸಾಲು ಕೇಸ್ನಲ್ಲಿ ಶಾಸಕ ಮುನಿರತ್ನ ಫುಲ್ ಲಾಕ್ ಆಗಿದ್ದು, ನಾಲ್ಕು ದಿನ ಜೈಲ್ ವಾಸದ ನಂತ್ರ ಮುನಿರತ್ನ ಮತ್ತೆ ಪೊಲೀಸರ ಅತಿಥಿಯಾಗಿದ್ದಾರೆ
ಇದನ್ನೂ ಓದಿ : ಇಂದಿನಿಂದ ಎರಡು ದಿನ ಸಿಎಂ ಮೈಸೂರು ಪ್ರವಾಸ – ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ..!