ಕೋಲಾರ : 18ನೇ ಲೋಕಸಭಾ ಚುನಾವಣೆಯ ಕಣ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ವೇಳೆ ಎಲ್ಲ ರಾಜಕೀಯ ಪಕ್ಷಗಳ ಚುನಾವಣಾ ಅಭ್ಯರ್ಥಿಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಆದರೆ ಕೋಲಾರ ಟಿಕೆಟ್ ಹಂಚಿಕೆ ವಿಚಾರದಲ್ಲಿ ಭಿನ್ನಮತ ಸ್ಪೋಟಗೊಂಡಿತ್ತು. ಸಚಿವ ಕೆ. ಎಚ್. ಮುನಿಯಪ್ಪ ಅವರ ಅಳಿಯ ಚಿಕ್ಕ ಪೆದ್ದಣ್ಣ ಅವರಿಗೆ ಟಿಕೆಟ್ ನೀಡಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಐವರು ಕಾಂಗ್ರೆಸ್ ಶಾಸಕರು ಬೆದರಿಕೆ ಒಡ್ಡಿದ್ದರು.
ನಿನ್ನೆ ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಶಾಸಕರಾದ ಕೊತ್ತೂರು ಮಂಜುನಾಥ್, ನಾರಾಯಣಸ್ವಾಮಿ ಹಾಗೂ MLCಗಳಾದ ನಜೀರ್ ಅಹ್ಮದ್, ಅನಿಲ್ಕುಮಾರ್ ರಾಜೀನಾಮೆ ನೀಡಲು ಬಿಗಿಪಟ್ಟು ಹಿಡಿದು, ವಿಧಾನಸೌಧಕ್ಕೂ ಭೇಟಿ ನೀಡಿದ್ದರು.
ಈ ಹಿನ್ನಲೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೀಟಿಂಗ್ ನಡೆಯಲಿದೆ. ಮೀಟಿಂಗ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಮೇಶ್ಕುಮಾರ್ ಬಣ, ಮುನಿಯಪ್ಪ ಬಣದ ಜೊತೆ ಚರ್ಚೆ ನಡೆಸಲಿದ್ದಾರೆ. MLA, MLCಗಳ ರಾಜೀನಾಮೆ ಬೆದರಿಕೆ ಎಫೆಕ್ಟ್ನಿಂದ ಮುನಿಯಪ್ಪ ಅಳಿಯಗೆ ಕಾಂಗ್ರೆಸ್ ಟಿಕೆಟ್ ತಪ್ಪೋದು ಫಿಕ್ಸ್ ಎಂದು ಹೇಳಲಾಗುತ್ತಿದೆ. ಬಲಗೈ ಸಮುದಾಯದ ಸಿ.ಎಂ ಮುನಿಯಪ್ಪ ಪರ ನಿಂತ ರಮೇಶ್ ಕುಮಾರ್ ಬಣ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣ ಬದಲಿಗೆ ಸಿ.ಎಂ ಮುನಿಯಪ್ಪಗೆ ಜಾನ್ಸ್..? ಸಿಗುತ್ತ ಅಂತ ಕಾದು ನೋಡಬೇಕಾಗಿದೆ.
ಇದನ್ನೂ ಓದಿ : ಕೊರೋನಾದಲ್ಲಿ ಸತ್ತವರ ಆತ್ಮಕ್ಕೆ ಶಾಂತಿ ಸಿಗಲು ಸುಧಾಕರ್ ಸೋಲಬೇಕು : ಹೂಡಿ ವಿಜಯಕುಮಾರ್..!