ಬೆಂಗಳೂರು : ಕೆ.ಆರ್ ಪುರ ವೃದ್ಧೆಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಂತಕ ದೇಹವನ್ನು ಎರಡು ಭಾಗ ಮಾಡಿ ಮನೆಯ ನೀರಿನ ಡ್ರಮ್ಗೆ ಅರ್ಧ ದೇಹ, ಮತ್ತೊಂದು ಭಾಗ ಕೆರೆಯಲ್ಲಿ ಎಸೆದಿದ್ದಾನೆ. ಈ ಕೊಲೆ ಪ್ರಕರಣ ಸಂಬಂಧ ದಿನೇಶ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಿಸರ್ಗ ಲೇಔಟ್ನಲ್ಲಿ 65 ವರ್ಷದ ಸುಶೀಲಮ್ಮನ ಕೊಲೆ ಆಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯ ಸುಶೀಲಮ್ಮ, 10 ವರ್ಷಗಳಿಂದ ನಿಸರ್ಗ ಲೇಔಟ್ನಲ್ಲಿ ನೆಲೆಸಿದ್ದರು. ವೃದ್ಧೆಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆಸ್ತಿ ಮಾರಾಟದಲ್ಲಿ ಬಂದ ಹಣದಲ್ಲಿ 8 ಲಕ್ಷ ರೂ.ಗೆ ಮನೆ ಬೋಗ್ಯಕ್ಕೆ ಪಡೆದು, ಮಕ್ಕಳಿಂದ ಪ್ರತ್ಯೇಕವಾಗಿ ವೃದ್ಧೆ ವಾಸವಾಗಿದ್ದರು.
ಅದೇ ಕಟ್ಟಡದಲ್ಲಿ ಅವರ ಕಿರಿಯ ಪುತ್ರಿ ಮತ್ತು ಸಮೀಪದಲ್ಲೇ ಮಗ ನೆಲೆಸಿದ್ದರು. ಪುತ್ರ ಪ್ರತಿ ತಿಂಗಳು ತಾಯಿಗೆ 2-3 ಸಾವಿರ ರೂ. ನೀಡುತ್ತಿದ್ದರು. ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿದ್ದ ಸುಶೀಲಮ್ಮ, ಚುನಾವಣಾ ಪ್ರಚಾರ ಸಹ ನಡೆಸಿದ್ದರು. ಈ ವೇಳೆ ದಿನೇಶ್ ಎಂಬಾತನ ಪರಿಚಯವಾಗಿದ್ದು, ಆಗಾಗ್ಗೆ ವೃದ್ಧೆ ಮನೆಗೆ ಬಂದು ಹೋಗುತ್ತಿದ್ದ.
ಹಣಕ್ಕಾಗಿ ದಿನೇಶ್ ಈ ಕೃತ್ಯ ಎಸಗಿರುವ ಶಂಕೆ ಮೇಲೆ ಅರೆಸ್ಟ್ ಮಾಡಿದ್ದು, ಅಜ್ಜಿ ಜೊತೆ ದಿನೇಶ್ ಮಾತನಾಡುತ್ತಿದ್ದನ್ನು ಮೊಮ್ಮಗಳು ನೋಡಿದ್ದಳು. ಇದಾದ ಬಳಿಕ ಅಜ್ಜಿಯ ಕೊಲೆಯಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿದ್ದಾರೆ.
ಇದನ್ನೂ ಓದಿ : ಕೊಳೆ ಬಟ್ಟೆ ಹಾಕಿದ್ದಾನೆಂದು ರೈತನನ್ನು ಮೆಟ್ರೋ ನಿಲ್ದಾಣದಲ್ಲಿ ತಡೆದ ಸಿಬ್ಬಂದಿ : ಪ್ರಯಾಣಿಕರಿಂದ ಭಾರೀ ಆಕ್ರೋಶ..!