ಬೆಂಗಳೂರು : ಬೆಂಗಳೂರು ಹೊರ ವಲಯದಲ್ಲಿ ವಿದ್ಯಾರ್ಥಿನಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸ್ಟೆಲ್ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 18 ವರ್ಷದ ಹರ್ಷಿತಾ ಚಂದಾಪುರ ಸಮೀಪದ ಹೀಲಲಿಗೆ ಕಾಲೇಜು ವಿದ್ಯಾರ್ಥಿನಿ.
ಹಾಸನ ಜಿಲ್ಲೆ ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ ಮೃತ ವಿದ್ಯಾರ್ಥಿನಿ. ಗುರುವಾರ ರಾತ್ರಿ ಹಾಸ್ಟೆಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಕಾಲೇಜಿನವರಿಂದಲೇ ಕಿರುಕುಳ ಎಂದು ಕೆಲ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಡಿಸಿದ್ದಾರೆ.
ಹರ್ಷಿತಾಗೆ ನ್ಯಾಯ ಕೊಡಿಸಿ ಎಂದು ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಸೂರ್ಯ ನಗರ ಪೊಲೀಸರು ಭೇಟಿ ನೀಡಿ, ವಿದ್ಯಾರ್ಥಿಗಳ ಮನವೊಲಿಸಿದ್ದಾರೆ.
ಇದನ್ನೂ ಓದಿ : ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಬಹುನಿರೀಕ್ಷಿತ ಸಿನಿಮಾ “ದ ಜಡ್ಜ್ ಮೆಂಟ್” ಮೇ 24 ರಂದು ತೆರೆಗೆ..!
Post Views: 96